ಪೋಸ್ಟರ್ 
ದೇಶ

ತಮಿಳುನಾಡಿನ ಈ ಸರ್ಕಾರಿ ಶಾಲೆಗೆ ಸೇರುವ ಮಕ್ಕಳಿಗೆ ಚಿನ್ನದ ನಾಣ್ಯ, 5 ಸಾವಿರ ರು., ಉಚಿತ ಸಮವಸ್ತ್ರ!

ಮಕ್ಕಳನ್ನು ಸರ್ಕಾರಿ ಶಾಲೆಗೆ ಸೆಳೆಯುವ ಉದ್ದೇಶದಿಂದ ತಮಿಳುನಾಡಿನ ಹಳ್ಳಿಯೊಂದರಲ್ಲಿ ವಿದ್ಯಾರ್ಥಿಗಳಿಗೆ ...

ಕೊಯಂಬತ್ತೂರು: ಮಕ್ಕಳನ್ನು ಸರ್ಕಾರಿ ಶಾಲೆಗೆ ಸೆಳೆಯುವ ಉದ್ದೇಶದಿಂದ ತಮಿಳುನಾಡಿನ ಹಳ್ಳಿಯೊಂದರಲ್ಲಿ ವಿದ್ಯಾರ್ಥಿಗಳಿಗೆ ಒಂದು ಗ್ರಾಂ ಚಿನ್ನದ ನಾಣ್ಯ, ಐದು ಸಾವಿರ ರು. ನಗದು ಹಾಗೂ ಎರಡು ಜತೆ ಸಮವಸ್ತ್ರ ನೀಡಲಾಗುತ್ತಿದೆ.
ಕೊಯಂಬಂತ್ತೂರಿನ ಅಣ್ಣೂರ್ ಸಮೀಪದ ಕೊನ್ನಾರ್ ಪಾಳ್ಯಂ ಶಾಲೆಯಲ್ಲಿ ಕೇವಲ ಆರು ಮಕ್ಕಳಿದ್ದು, ಶಿಕ್ಷಕರು ತಮ್ಮ ಶಾಲೆಗೆ ಹೆಚ್ಚು ವಿದ್ಯಾರ್ಥಿಗಳು ಬರುವಂತೆ ಉತ್ತೇಜಿಸಲು ಮೊದಲ ಹತ್ತು ಮಕ್ಕಳಿಗೆ ಒಂದು ಗ್ರಾಂ ಚಿನ್ನದ ನಾಣ್ಯ, ಐದು ಸಾವಿರ ರುಪಾಯಿ ಜತೆಗೆ ಎರಡು ಜತೆ ಸಮವಸ್ತ್ರ ನೀಡಲು ಮುಂದಾಗಿದ್ದಾರೆ.
ಶಿಕ್ಷಕರ ಈ ವಿನೂತನ ಪ್ರಯತ್ನ ಫಲ ನೀಡಿದ್ದು, ಹೊಸದಾಗಿ ಮೂವರು ವಿದ್ಯಾರ್ಥಿಗಳು ಶಾಲೆ ಸೇರಿದ್ದಾರೆ ಮತ್ತು ಇನ್ನು ಮೂವರು ವಿದ್ಯಾರ್ಥಿಗಳು ಆಸಕ್ತಿ ತೋರಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ರಾಜೇಶ್ ಚಂದ್ರಕುಮಾರ್ ವೈ ಅವರು ತಿಳಿಸಿದ್ದಾರೆ.
ಅತಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳಿರುವ ಶಾಲೆಗಳನ್ನು ಮುಚ್ಚಲು ತಮಿಳುನಾಡು ಸರ್ಕಾರ ಚಿಂತನೆ ನಡೆಸಿದ್ದು, ಹತ್ತಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಕಾರಣ ಅದನ್ನು ಮುಚ್ಚುವ ಭೀತಿ ಎದುರಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT