ಕುಟುಂಬ ಸದಸ್ಯರು 
ದೇಶ

ಬುರಾರಿ ಕುಟುಂಬದ ಸಾಮೂಹಿಕ ಆತ್ಮಹತ್ಯಗೆ ಮಾನಸಿಕ ಸಮಸ್ಯೆ ಕಾರಣ: ದೆಹಲಿ ಪೊಲೀಸ್

ಬುರಾರಿಯಲ್ಲಿ ನಡೆದಿದ್ದ ಕುಟುಂಬವೊಂದರ 11 ಮಂದಿ ನಿಗೂಢ ಸಾಮೂಹಿಕ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು , ಕುಟುಂಬ ಅನುಸರಿಸಿದ ಆಚರಣೆಯೇ ಸಾಮೂಹಿಕ ಆತ್ಮಹತ್ಯೆಗೆ ಕಾರಣ ಎಂದು ಹೇಳಿದ್ದಾರೆ.

ನವದೆಹಲಿ: ಬುರಾರಿಯಲ್ಲಿ ನಡೆದಿದ್ದ ಕುಟುಂಬವೊಂದರ 11 ಮಂದಿ ನಿಗೂಢ ಸಾಮೂಹಿಕ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಕುಟುಂಬ ಅನುಸರಿಸಿದ ಆಚರಣೆಯೇ  ಸಾಮೂಹಿಕ ಆತ್ಮಹತ್ಯೆಗೆ ಕಾರಣ ಎಂದು ಹೇಳಿದ್ದಾರೆ.
ಕೇಂದ್ರ ಅಪರಾಧ ವಿಭಾಗ ಈ ಪ್ರಕರಣದ ವರದಿಯನ್ನು ದೆಹಲಿ ಪೊಲೀಸ್ ಆಯುಕ್ತರಾದ ಅಮೂಲ್ಯ ಪಟ್ನಾಯಕ್ ಅವರಿಗೆ ನೀಡಲಿದೆ. ನಂತರ ಗೃಹ ಸಚಿವಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ 1 ರಂದು ಎರಡು ಅಂತಸ್ತಿನ ಮನೆಯಿಂದ  ಏಳು ಮಹಿಳೆಯರು ಹಾಗೂ ನಾಲ್ಕು ಪುರುಷರ ಮೃತದೇಹಗಳನ್ನು ಹೊರತೆಗೆಯಲಾಗಿತ್ತು.  ಕಣ್ಣುಗಳಿಗೆ ಬಟ್ಟೆ ಕಟ್ಟಿಕೊಂಡು ನೇಣು ಹಾಕಿಕೊಂಡಿದ್ದರು. ಮನೆಯ ಹಿರಿಯ ಭಾಟಿಯಾ ಹಾಗೂ ನಾರಾಯಣಿ ದೇವಿ  ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.
ಭಾಟಿಯಾ ಮನೆಯ ಎದುರುಗಡೆಯ ಆವರಣದಲ್ಲಿನ ಸಿಸಿಟಿವಿ ದೃಶ್ಯಗಳು  ತನಿಖೆಗೆ  ನೆರವಾಗುವುದರ ಜೊತೆಗೆ ಸಾಮೂಹಿಕ ಆತ್ಮಹತ್ಯೆ ಎಂಬುದು ಅರಿಯುವಂತಾಯಿತು ಎಂದು ಅಪರಾಧ ವಿಭಾಗದ ಮುಖ್ಯ  ಜಂಟಿ ಆಯುಕ್ತ ಅಲೋಕ್ ಕುಮಾರ್ ಹೇಳಿದ್ದಾರೆ.
 ಸಿಸಿಟಿವಿಯಲ್ಲಿ ಏನಿದೆ : ಕುಟುಂಬ ಸದಸ್ಯರೊಬ್ಬರು ಐದು ಸ್ಟೂಲ್ ತರುವುದು , ಮತ್ತೊಬ್ಬರು ಪ್ಲೈವುಡ್ ನಿಂದ ಕೇಬಲ್  ತಂದಿದ್ದಾರೆ.   11 ಮಂದಿ ಆತ್ಮಹತ್ಯೆ ಮಾಡಿಕೊಂಡು ಸ್ಥಳದಲ್ಲಿ ಈ ವಸ್ತುಗಳು ದೊರೆತಿದ್ದವು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT