ಕುಟುಂಬ ಸದಸ್ಯರು 
ದೇಶ

ಬುರಾರಿ ಕುಟುಂಬದ ಸಾಮೂಹಿಕ ಆತ್ಮಹತ್ಯಗೆ ಮಾನಸಿಕ ಸಮಸ್ಯೆ ಕಾರಣ: ದೆಹಲಿ ಪೊಲೀಸ್

ಬುರಾರಿಯಲ್ಲಿ ನಡೆದಿದ್ದ ಕುಟುಂಬವೊಂದರ 11 ಮಂದಿ ನಿಗೂಢ ಸಾಮೂಹಿಕ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು , ಕುಟುಂಬ ಅನುಸರಿಸಿದ ಆಚರಣೆಯೇ ಸಾಮೂಹಿಕ ಆತ್ಮಹತ್ಯೆಗೆ ಕಾರಣ ಎಂದು ಹೇಳಿದ್ದಾರೆ.

ನವದೆಹಲಿ: ಬುರಾರಿಯಲ್ಲಿ ನಡೆದಿದ್ದ ಕುಟುಂಬವೊಂದರ 11 ಮಂದಿ ನಿಗೂಢ ಸಾಮೂಹಿಕ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಕುಟುಂಬ ಅನುಸರಿಸಿದ ಆಚರಣೆಯೇ  ಸಾಮೂಹಿಕ ಆತ್ಮಹತ್ಯೆಗೆ ಕಾರಣ ಎಂದು ಹೇಳಿದ್ದಾರೆ.
ಕೇಂದ್ರ ಅಪರಾಧ ವಿಭಾಗ ಈ ಪ್ರಕರಣದ ವರದಿಯನ್ನು ದೆಹಲಿ ಪೊಲೀಸ್ ಆಯುಕ್ತರಾದ ಅಮೂಲ್ಯ ಪಟ್ನಾಯಕ್ ಅವರಿಗೆ ನೀಡಲಿದೆ. ನಂತರ ಗೃಹ ಸಚಿವಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ 1 ರಂದು ಎರಡು ಅಂತಸ್ತಿನ ಮನೆಯಿಂದ  ಏಳು ಮಹಿಳೆಯರು ಹಾಗೂ ನಾಲ್ಕು ಪುರುಷರ ಮೃತದೇಹಗಳನ್ನು ಹೊರತೆಗೆಯಲಾಗಿತ್ತು.  ಕಣ್ಣುಗಳಿಗೆ ಬಟ್ಟೆ ಕಟ್ಟಿಕೊಂಡು ನೇಣು ಹಾಕಿಕೊಂಡಿದ್ದರು. ಮನೆಯ ಹಿರಿಯ ಭಾಟಿಯಾ ಹಾಗೂ ನಾರಾಯಣಿ ದೇವಿ  ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.
ಭಾಟಿಯಾ ಮನೆಯ ಎದುರುಗಡೆಯ ಆವರಣದಲ್ಲಿನ ಸಿಸಿಟಿವಿ ದೃಶ್ಯಗಳು  ತನಿಖೆಗೆ  ನೆರವಾಗುವುದರ ಜೊತೆಗೆ ಸಾಮೂಹಿಕ ಆತ್ಮಹತ್ಯೆ ಎಂಬುದು ಅರಿಯುವಂತಾಯಿತು ಎಂದು ಅಪರಾಧ ವಿಭಾಗದ ಮುಖ್ಯ  ಜಂಟಿ ಆಯುಕ್ತ ಅಲೋಕ್ ಕುಮಾರ್ ಹೇಳಿದ್ದಾರೆ.
 ಸಿಸಿಟಿವಿಯಲ್ಲಿ ಏನಿದೆ : ಕುಟುಂಬ ಸದಸ್ಯರೊಬ್ಬರು ಐದು ಸ್ಟೂಲ್ ತರುವುದು , ಮತ್ತೊಬ್ಬರು ಪ್ಲೈವುಡ್ ನಿಂದ ಕೇಬಲ್  ತಂದಿದ್ದಾರೆ.   11 ಮಂದಿ ಆತ್ಮಹತ್ಯೆ ಮಾಡಿಕೊಂಡು ಸ್ಥಳದಲ್ಲಿ ಈ ವಸ್ತುಗಳು ದೊರೆತಿದ್ದವು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT