ಕೈಲಾಸ ಪರ್ವತ 
ದೇಶ

ಕೈಲಾಸ ಮಾನಸ ಯಾತ್ರ್ರೆ: ಸಿಮಿಕೋಟ್ ನಿಂದ 883 ಯಾತ್ರಿಗಳ ಸ್ಥಳಾಂತರ, ರಕ್ಷಣೆಯ ನಿರೀಕ್ಷೆಯಲ್ಲಿ 500 ಭಾರತೀಯರು

ನೇಪಾಳದಲ್ಲಿ ಅಪಾಯಕ್ಕೆ ಸಿಲುಕಿರುವ ಕೈಲಾಸ ಮಾನಸ ಸರೋವರ ಯಾತ್ರಿಕರಲ್ಲಿ 883 ಯಾತ್ರಿಗಳನ್ನು ಕಳೆದ ಮೂರು ದಿನಗಳಲ್ಲಿ ನೇಪಾಳದ ಸಿಮಿಕೋಟ್ ವಲಯದಿಂದ ಸ್ಥಳಾಂತರಿಸಲಾಗಿದೆ

ನವದೆಹಲಿ: ನೇಪಾಳದಲ್ಲಿ ಅಪಾಯಕ್ಕೆ ಸಿಲುಕಿರುವ ಕೈಲಾಸ ಮಾನಸ ಸರೋವರ ಯಾತ್ರಿಕರಲ್ಲಿ 883 ಯಾತ್ರಿಗಳನ್ನು ಕಳೆದ ಮೂರು ದಿನಗಳಲ್ಲಿ ನೇಪಾಳದ ಸಿಮಿಕೋಟ್ ವಲಯದಿಂದ ಸ್ಥಳಾಂತರಿಸಲಾಗಿದೆ.ಅದಾಗ್ಯೂ ಇನ್ನೂ ಸುಮಾರು 500 ಯಾತ್ರಾರ್ಥಿಗಳು ರಕ್ಷಣೆಗಾಗಿ ಕಾಯುತ್ತಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಹಿಲ್ಸಾ ಹಾಗು ಸಿಮಿಕೋಟ್ ವಲಯದಲ್ಲಿರುವ ಯಾತ್ರಿಕರನ್ನು ಅಪಾಯದಿಂದ ರಕ್ಷಿಸಲುನೇಪಾಳದ ಭಾರತೀಯ ದೂತಾವಾಸ ಕಚೇರಿ ದೊಡ್ಡ ಪ್ರಮಾಣದಲ್ಲಿ ಪ್ರಯತ್ನ ನಡೆಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ. "ವಾತಾವರಣ ಹಿತಕರವೆನಿಸಿದರೆ ಅವರನ್ನು ಮುಂದಿನ ದಿನಗಳಲ್ಲಿ ಯಾತ್ರೆಗೆ ಕಳಿಸಲಾಗುತ್ತದೆ" ಅವರು ಹೇಳಿದ್ದಾರೆ.
"ಕನಿಷ್ಠ 675 ಯಾತ್ರಿಕರನ್ನು ಹಿಲ್ಸಾ ಮತ್ತು ಸಿಮಿಕೋಟ್ ಗೆ ಸ್ಥಳಾಂತರಿಸಲಾಗಿದೆ.ಐವತ್ತ ಮೂರು ನಾಗರಿಕ ವಿಮಾನ ಯಾತ್ರಿಕರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ,. 142 ಚಾಪರ್ ಕ್ರಾಫ್ಟ್ ಸಹ ಈ ಕಾರ್ಯದಲ್ಲಿ ಬಳಕೆಯಾಗುತ್ತಿದೆ. ಸದ್ಯ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ನಾವು ಸಿಮಿಕೋಟ್ ನಲ್ಲಿ 516 ಹಾಗು ಸುರ್ಖೇತ್ ನಲ್ಲಿ 50 ಯಾತ್ರಿಗಳನ್ನು ಗುರುತಿಸಿದ್ದೇವೆ.ಇಲ್ಲಿ ಯಾವ ಬಿಕ್ಕಟ್ಟಿನ ವಾತಾವರಣವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಅತಿಯಾದ ಎತ್ತರಕ್ಕೇರಿದ ಸಮಯದಲ್ಲಿ ಆಮ್ಲಜನಕ ಕೊರತೆಯಿಂದ ಅನೇಕ ಯಾತ್ರಾರ್ಥಿಗಳಿಗೆ ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತದೆ.ಈ ರೀರಿಯ ಆರೋಗ್ಯ ಸಮಸ್ಯೆಯಿಂದಾಗಿ ಹಲವರು ಸಾವನ್ನಪ್ಪುತ್ತಾರೆ. ಈ ವರ್ಷ ಇದುವರೆಗೆ ಒಟ್ಟು ಎಂಟು ಯಾತ್ರಾರ್ಥಿಗಳು ಹೀಗೆ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.
ಕೈಲಾಸ ಮಾನಸ ಸರೋವರವು ಸಮುದ್ರ ಮಟ್ಟಕ್ಕಿಂತ 5,950 ಮೀಟರ್ ಎತ್ತರದಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT