ರಾಜನಾಥ್ ಸಿಂಗ್ 
ದೇಶ

ಪ್ರಾಮಾಣಿಕ ಆಡಳಿತದ ಮೂಲಕ ಕಾಶ್ಮೀರದಲ್ಲಿ ಶಾಂತಿ, ಸ್ಥಿರತೆ: ರಾಜನಾಥ್ ಸಿಂಗ್

ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದ ನಂತರ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ಗೃಹ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾದ ನಂತರ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ಪ್ರಾಮಾಣಿಕ, ಪರಿಣಾಮಕಾರಿ ಮತ್ತು ದಕ್ಷ ಆಡಳಿತದ ಮೂಲಕ ಕಾಶ್ಮೀರದಲ್ಲಿ ಶಾಂತಿ ಮತ್ತು ಸ್ಥಿರತೆ ತರುವುದಾಗಿ ಗುರುವಾರ ಹೇಳಿದ್ದಾರೆ.
ಕಾಶ್ಮೀರ ರಾಜ್ಯಪಾಲ ಎನ್ಎನ್ ವೊಹ್ರಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದ ಉನ್ನತ ಮಟ್ಟದ್ದ ಭದ್ರತಾ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್, ರಾಜ್ಯದಲ್ಲಿ ಶಾಂತಿ ಸ್ಥಾಪಿಸಿದ ನಂತರವೇ ಕಾಶ್ಮೀರಿ ಜನತೆಗೆ ಅಭಿವೃದ್ಧಿಯ ಕನಸು ನನಸಾಗಲಿದೆ ಎಂದರು.
ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಮತ್ತು ಆಡಳಿತದಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲು ಬದ್ಧವಾಗಿದೆ ಎಂದರು.
ಬಿಜೆಪಿ, ಪಿಡಿಪಿಗೆ ನೀಡಿದ್ದ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲಿ ಮೆಹಬೂಬ ಮುಫ್ತಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ನಂತರ ಜೂನ್ 20ರಂದು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT