ವಿವಿಯಿಂದ ಅಮಾನತು: ಜೆಎನ್ ಯು ಸಮಿತಿ ವಿರುದ್ಧ ಕೋರ್ಟ್ ಮೊರೆ ಹೋಗಲಿರುವ ಉಮರ್ ಖಾಲೀದ್ 
ದೇಶ

ವಿವಿಯಿಂದ ಅಮಾನತು: ಜೆಎನ್ ಯು ಸಮಿತಿ ವಿರುದ್ಧ ಕೋರ್ಟ್ ಮೊರೆ ಹೋಗಲಿರುವ ಉಮರ್ ಖಾಲೀದ್

ಭಯೋತ್ಪಾದಕ ಅಫ್ಜಲ್ ಗುರುವಿಗೆ ವಿಧಿಸಲಾದ ಗಲ್ಲುಶಿಕ್ಷೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ತನ್ನನ್ನು ಅಮಾನತುಗೊಳಿಸಿದ್ದನ್ನು ಜೆಎನ್ ಯು ವಿವಿಯ ವಿದ್ಯಾರ್ಥಿ ಉಮರ್ ಖಾಲೀದ್ ಕೋರ್ಟ್ ನಲ್ಲಿ

ನವದೆಹಲಿ: ಭಯೋತ್ಪಾದಕ ಅಫ್ಜಲ್ ಗುರುವಿಗೆ ವಿಧಿಸಲಾದ ಗಲ್ಲುಶಿಕ್ಷೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ತನ್ನನ್ನು ಅಮಾನತುಗೊಳಿಸಿದ್ದನ್ನು ಜೆಎನ್ ಯು ವಿವಿಯ ವಿದ್ಯಾರ್ಥಿ ಉಮರ್ ಖಾಲೀದ್ ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ಹೇಳಿದ್ದಾನೆ. 
2016  ರ ಫೆ.9 ರ ಅಮಾನತು ಆದೇಶವನ್ನು ಎತ್ತಿ ಹಿಡಿದಿರುವ ಜೆಎನ್ ಯು ಸಮಿತಿಯ ಶಿಫಾರಸ್ಸನ್ನು ಕೋರ್ಟ್ ನಲ್ಲಿ ಪ್ರಶ್ನಿಸುವುದಾಗಿ ಖಾಲಿದ್ ಹೇಳಿದ್ದಾನೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಖಾಲೀದ್ 2 ವರ್ಷಗಳಲ್ಲಿ ಮೂರನೆ ಬಾರಿಗೆ ಜೆಎನ್ ಯು ಆಡಳಿತ ಮಂಡಳಿ ನನ್ನ ವಿರುದ್ಧ ಅಮಾನತು ಆದೇಶವನ್ನು ಮುಂದುವರೆಸಿದೆ. ಇದು ಎಲ್ಲಾ ನೈಸರ್ಗಿಕ ನ್ಯಾಯದ ವಿರುದ್ಧವಾದ ಆದೇಶವಾಗಿದೆ. ಇದನ್ನು ಶೀಘ್ರವೇ ಬಯಲಿಗೆ ಎಳೆಯುತ್ತೇವೆ, ಮತ್ತೊಮ್ಮೆ ಕೋರ್ಟ್ ನಲ್ಲಿ ಪ್ರಶ್ನಿಸುತ್ತೇವೆ ಎಂದು ಖಾಲೀದ್ ತಿಳಿಸಿದ್ದಾನೆ, 
ನಮ್ಮ ವಿರುದ್ಧದ ತನಿಖೆಯನ್ನು ಪೂರ್ವಾಗ್ರಹದಿಂದ ನಡೆಸಲಾಗಿದೆ, ಅಷ್ಟೇ ಅಲ್ಲದೇ ನಮ್ಮನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಪಿಹೆಚ್ ಡಿ ಮಾಡಲು ಜೆಎನ್ ಯು ಸೇರಿ ದೇಶವಿರೋಧಿ ಘೋಷಣೆ ಕೂಗಿರುವ ಉಮರ್ ಖಾಲೀದ್ ಆರೋಪಿಸಿದ್ದಾನೆ.  ಶಿಸ್ತಿನ ಮಾನದಂಡಗಳನ್ನು ಮೀರಿದ್ದಕ್ಕಾಗಿ ವಿವಿಯ 5 ಸದಸ್ಯರ ಸಮಿತಿ ಉಮರ್ ಖಾಲೀದ್ ಸೇರಿದಂತೆ ಇನ್ನೂ ಇಬ್ಬರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ 13 ವಿದ್ಯಾರ್ಥಿಗಳಿಗೆ ದಂಡ ವಿಧಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT