ಬಿಂದಿ ಇಟ್ಟಿರುವ ಬಾಲಕಿ 
ದೇಶ

ಬಿಂದಿ ಇಟ್ಟಿದ್ದಕ್ಕೆ ಬಾಲಕಿ ಮದ್ರಾಸದಿಂದ ಉಚ್ಚಾಟನೆ: ಫೇಸ್ಬುಕ್ ನಲ್ಲಿ ನೊಂದ ತಂದೆ ಅಳಲು

5ನೇ ತರಗತಿ ಬಾಲಕಿ ಹಣೆಗೆ ಬಿಂದಿ ಇಟ್ಟಿದ್ದಕ್ಕಾಗಿ ಮದ್ರಾಸಾದಿಂದ ಹೊರಹಾಕಿರುವ ಘಟನೆ ಕೇರಳದಲ್ಲಿ ನಡೆದಿದೆ....

ತಿರುವನಂತಪುರ: 5ನೇ ತರಗತಿ ಬಾಲಕಿ ಹಣೆಗೆ ಬಿಂದಿ ಇಟ್ಟಿದ್ದಕ್ಕಾಗಿ ಮದ್ರಾಸಾದಿಂದ ಹೊರಹಾಕಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕಿರು ಚಿತ್ರವೊಂದರಲ್ಲಿ ತನಗೆ ನೀಡಲಾದ ಪಾತ್ರವನ್ನು ವಹಿಸುವುದಕ್ಕಾಗಿ ಹಣೆಯಲ್ಲಿ ಶ್ರೀಗಂಧದ ಬಿಂದಿಯನ್ನು ಹಾಕಿಕೊಂಡ ಕಾರಣಕ್ಕೆ ಐದನೇ ತರಗತಿಯ ವಿದ್ಯಾರ್ಥಿನಿಯನ್ನು ಮದ್ರಸದಿಂದ ಉಚ್ಚಾಟಿಸಲಾಗಿದೆ.
ಬಾಲಕಿಯ ತಂದೆ ಮದ್ರಸದ ಈ ಕ್ರಮವನ್ನು ಬಲವಾಗಿ ಖಂಡಿಸಿದ್ದಾರೆ.  "ನನ್ನ ಮಗಳನ್ನು ಮದ್ರಸದಿಂದ ಉಚ್ಚಾಟಿಸಲಾಗಿರುವುದು ದುರದೃಷ್ಟಕರ,  ಆಕೆಗೆ ಕಲ್ಲು ಹೊಡೆಯದಿರುವುದೇ ನಮ್ಮ ಅದೃಷ್ಟ ಎಂದು ವಿದ್ಯಾರ್ಥಿನಿಯ ತಂದೆ ಉಮ್ಮರ್‌ ಮಲಾಯಿಲ್‌ ಅವರು ಫೇಸ್‌ ಬುಕ್‌ನಲ್ಲಿ ಹಾಕಿರುವ ಪೋಸ್ಟ್‌ಗೆ 7,500 ಲೈಕ್‌ಗಳು ಬಂದಿದ್ದು 2,700 ಮಂದಿ ಅದನ್ನು ಶೇರ್‌ ಮಾಡಿಕೊಂಡಿದ್ದಾರೆ. 
ನನ್ನ ಮಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿದ್ದಾಳೆ. ನೃತ್ಯ, ಹಾಡುಗಾರಿಕೆಯಲ್ಲಿ ನಿರತಳಾಗಿದ್ದಾಳೆ. ಮದ್ರಸ ಮಟ್ಟದ ಸ್ಪರ್ಧೆಯಲ್ಲಿ ಆಕೆ ತನ್ನ ಶಾಲೆಗೆ ಹಲವಾರು ಬಹುಮಾನಗಳನ್ನು ಗೆದ್ದು ತಂದಿದ್ದಾಳೆ; ಇದರ ಹೊರತಾಗಿಯೂ ಆಕೆಯನ್ನು ಮದ್ರಸದಿಂದ ಉಚ್ಚಾಟಿಸಿರುವುದು ನನಗೆ ಆಘಾತ ತಂದಿದೆ.
ಆಕೆ ತನ್ನ ಹಣೆಯಲ್ಲಿ, ಅದೂ ಕಿರುಚಿತ್ರವೊಂದರಲ್ಲಿ ನಟಿಸುವುದಕ್ಕಾಗಿ, ಬಿಂದಿ ಹಾಕಿಕೊಂಡದ್ದಕ್ಕಾಗಿ ಆಕೆಯನ್ನು ಮದ್ರಸದಿಂದ ಉಚ್ಚಾಟಿಸಲಾಗಿದೆ' ಎಂದು ಬಾಲಕಿಯ ತಂದೆ ಮಲಾಯಿಲ್‌ ಅವರು ತಮ್ಮ ಫೇಸ್‌ ಬುಕ್‌ನಲ್ಲಿ ಮಲಯಾಳಂನಲ್ಲಿ ಬರೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel