ಸುನಂದಾ ಪುಷ್ಕರ್ ಮತ್ತು ಶಶಿ ತರೂರ್ 
ದೇಶ

ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣ: ಶಶಿ ತರೂರ್'ಗೆ ಜಾಮೀನು ಮಂಜೂರು

ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ...

ನವದೆಹಲಿ; ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. 
ಸುನಂದಾ ಪುಷ್ಕರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ಸಲ್ಲಿಸಿದ್ದ ದೋಷಾರೋಪಣಾ ಪಟ್ಟಿಯ ಆಧಾರದ ಮೇಲೆ ಈ ಹಿಂದೆ ನ್ಯಾಯಾಲಯ ಶಶಿ ತರೂರ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಇದರಂತೆ ಜುಲೈ.5 ರಂದು ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿತ್ತು. 
ಬಳಿಕ ನಿರೀಕ್ಷಣಾ ಜಾಮೀನು ಕೋರಿ ಶಶಿ ತರೂರ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದರಂತೆ ಗುರುವಾರ ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. 
ಇಂದು ನಡೆದ ವಿಚಾರಣೆಗೆ ಹಾಜರಾದ ಶಶಿ ತರೂರ್ ಅವರು ಜು.5 ರಂದು ಸೆಷನ್ಸ್ ನ್ಯಾಯಾಲಯ ತಮಗೆ ಜಾಮೀನು ಮಂಜೂರು ಮಾಡಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 
ಬಳಿಕ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ ವಿಶಾಲ್ ಅವರು ಶೂರಿಟಿಗಾಗಿ ರೂ.1 ಲಕ್ಷ ಬಾಂಡ್ ನೀಡುವಂತೆ ಸೂಚಿಸಿದ್ದಾರೆ. ಅಲ್ಲದೆ, ಅನುಮತಿ ಇಲ್ಲದೆಯೇ ದೇಶ ಬಿಟ್ಟು ಹೋಗದಂತೆ ಹಾಗೂ ಸಾಕ್ಷ್ಾದನಗಳನ್ನು ನಾಶಮಾಡುವ ಅಥವಾ ಸಾಕ್ಷ್ಯಾಧಾರಿಗಳಿಗೆ ಬೆದರಿಕೆಯೊಡ್ಡುವ ಯಾವುದೇ ಪ್ರಯತ್ನಗಳನ್ನು ಮಾಡದಂತೆಯೂ ಸೂಚನೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT