ಸಂಗ್ರಹ ಚಿತ್ರ 
ದೇಶ

ಝಾಕಿರ್ ನಾಯ್ಕ್ ಬಾಂಗ್ಲಾದೇಶಕ್ಕೆ ಬರಲು ಅವಕಾಶ ನೀಡುವುದಿಲ್ಲ: ಪ್ರಧಾನಿ ಶೇಖ್ ಹಸೀನಾ ಸಹವರ್ತಿ

ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಬಾಂಗ್ಲಾದೇಶಕ್ಕೆ ಬರಲು ಅವಕಾಶ ನೀಡುವುದಿಲ್ಲ ಎಂದು ಬಾಂಗ್ಲಾದೇಶ ಹೇಳಿದೆ.

ನವದೆಹಲಿ: ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಬಾಂಗ್ಲಾದೇಶಕ್ಕೆ ಬರಲು ಅವಕಾಶ ನೀಡುವುದಿಲ್ಲ ಎಂದು ಬಾಂಗ್ಲಾದೇಶ ಹೇಳಿದೆ.
ನವದೆಹಲಿಯಲ್ಲಿ ಮಾತನಾಡಿದ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಸಹವರ್ತಿ ಹುಸೇನ್ ಟೌಫೀಕ್ ಇಮಾಮ್ ಅವರು, ವಿಚಾರಣೆ ನಿಮಿತ್ತ ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ನನ್ನು ಭಾರತಕ್ಕೆ ಕರೆತರುವ ಪ್ರಯತ್ನಕ್ಕೆ ಬಾಂಗ್ಲಾದೇಶ ಸಂಪೂರ್ಣ ಸಹಕಾರ ನೀಡಲಿದೆ. ಯಾವುದೇ ಕಾರಣಕ್ಕೂ ಬಾಂಗ್ಲಾದೇಶದ ಗಡಿಯನ್ನು ಯಾವುದೇ ಕಾರಣಕ್ಕೂ ಭಾರತದ ವಿರುದ್ಧ ಬಳಕೆ ಮಾಡಲು ತಾವು ಅನುವು ಮಾಡಿಕೊಡುವುದಿಲ್ಲ. ಝಾಕಿರ್ ನಾಯ್ಕ್ ಬಾಂಗ್ಲಾದೇಶಕ್ಕೆ ಬರಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರ ರಾಜಕೀಯ ಸಲಹೆಗಾರರು ಕೂಡ ಆಗಿರುವ ಹುಸೇನ್ ಟೌಫೀಕ್ ಇಮಾಮ್ ಅವರು ದೆಹಲಿಯಲ್ಲಿ ನಡೆದ 'ಇಂಡೋ-ಬಾಂಗ್ಲಾದೇಶ: ಐತಿಹಾಸಿಕ ಮತ್ತು ಸಮಕಾಲೀನ ದೃಷ್ಟಿಕೋನ' ಎಂಬ ವಿಚಾರದ ಕುರಿತು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಭಾರತ ಮತ್ತು ಬಾಂಗ್ಲಾದೇಶ ಸಂಬಂಧ ಸುಧಾರಣೆ, ಭದ್ರತಾ ಸಹಕಾರ ಮತ್ತು ವಾಣಿಜ್ಯ ಸಹಕಾರದ ಕುರಿತು  ಇಮಾಮ್ ಮಾತನಾಡಿದರು.
ಉಗ್ರವಾದ ಕುರಿತು ಬಾಂಗ್ಲಾದೇಶ ತನ್ನ ಶೂನ್ಯ ಅಸಹಿಷ್ಟುತೆ ನೀತಿಯನ್ನು ಮುಂದುವರೆಸಲಿದ್ದು, ಭಾರತಕ್ಕೆ ಸಂಪೂರ್ಣ ಸಹಕಾರ ನೀಡಲಿದೆ. ಯಾವುದೇ ಕಾರಣಕ್ಕೂ ಝಾಕಿರ್ ನಾಯ್ಕ್ ತಮ್ಮ ದೇಶ ಪ್ರವೇಶ ಮಾಡಲು ಅವಕಾಶ ನೀಡುವುದಿಲ್ಲ. ಬಾಂಗ್ಲಾದೇಶ ಕೂಡ ಭಯೋತ್ಪಾದನೆಯಿಂದ ನಲುಗಿದೆ. 2016ರಲ್ಲಿ ಢಾಕಾದ ಹೋಲಿ ಆರ್ಟಿಸನ್ ಬೇಕರಿ ಕೆಫೆಯಲ್ಲಿನ ಉಗ್ರ ದಾಳಿ ಇನ್ನೂ ನಮ್ಮ ಕಣ್ಣ ಮುಂದಿದೆ. ಅಂದು ದಾಳಿ ನಡೆಸಿದ್ದ ದಾಳಿಕೋರರು ಇದೇ ಝಾಕಿರ್ ನಾಯ್ಕ್ ಪ್ರಚೋದನಾತ್ಮಕ ಭಾಷಣದಿಂದ ಪ್ರೇರಿತರಾಗಿದ್ದರು. ದಾಳಿಕೋರರಲ್ಲಿ ಓರ್ವನಾಗಿದ್ದ ಉಗ್ರ ರೋಹನ್ ಇಮ್ತಿಯಾಜ್ ಇದೇ ಝಾಕಿರ್ ನಾಯ್ಕ್ ಭಾಷಣವನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT