ಸಂಗ್ರಹ ಚಿತ್ರ 
ದೇಶ

ಬುರ್ಹಾನ್ ವಾನಿ ಹತ್ಯೆಯಾಗಿ 2 ವರ್ಷ: ಶ್ರೀನಗರ ಸೇರಿ ಹಲವೆಡೆ ನಿರ್ಬಂಧ

ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವಾನಿ ಹತ್ಯೆಯಾಗಿ ಇಂದಿಗೆ 2 ವರ್ಷಗಳಾಗಿರುವ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಸಲುವಾಗಿ ಶ್ರೀನಗರ ಸೇರಿ ಹಲವೆಡೆ ನಿರ್ಬಂದ ಹೇರಲಾಗಿದೆ ಎಂದು ಭಾನುವಾರ...

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವಾನಿ ಹತ್ಯೆಯಾಗಿ ಇಂದಿಗೆ 2 ವರ್ಷಗಳಾಗಿರುವ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತಿಭಟನೆಗಳನ್ನು ಹತ್ತಿಕ್ಕುವ ಸಲುವಾಗಿ ಶ್ರೀನಗರ ಸೇರಿ ಹಲವೆಡೆ ನಿರ್ಬಂದ ಹೇರಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. 
2016ಜು.8 ರಂದು ಸೇನಾಪಡೆಗಳ ಕಾರ್ಯಾಚರಣೆ ವೇಳೆ ಬುರ್ಹಾನ್ ವಾನಿ ಹತ್ಯೆಯಾಗಿದ್ದ. ಅಂದಿನಿಂದ ಇಂದಿನವರೆಗೂ ಕಾಶ್ಮೀರದಲ್ಲಿ ಪ್ರಕ್ಷುಬ್ದತೆ ಮುಂದುವರೆದಿದೆ. 
ಈ ನಡುವೆ ಹಿರಿಯ ಪ್ರತ್ಯೇಕತಾವಾದಿ ನಾಯಕರುಗಳಾದ ಸೈಯದ್ದ ಅಲಿ ಗಿಲಾನಿ ಮತ್ತು ಮಿರ್ವೈಜ್ ಉಮರ್ ಫರೀಕ್ ಅವರನ್ನು ಗೃಹ ಬಂಧನದಲ್ಲಿರಸಲಾಗಿದ್ದು, ಮೊಹಮ್ಮದ್ ಯಾಸಿನ್ ಮಲಿಕ್ ಅವರನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆ. 
ನೌಹಟ್ಟಾ, ಖನ್ಯಾರ್, ರೈನಾವಾರಿ, ಎಂ.ಆರ್. ಗಂಜ್ ಮತ್ತು ಶ್ರೀನಗರ ಹಳೇ ನಗರ  ಸಫಾ ಕದಲ್ ಪೊಲೀಸ್ ಠಾಣಾ ವ್ಯಾಪ್ತಿ ಸೇರಿದೆದ ಹಲವೆಡೆ ನಿರ್ಬಂಧ ಹೇರಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 
ಇದಲ್ಲದೆ, ತ್ರಾಲ್ ನಲ್ಲಿಯೂ ಎರಡು ದಿನಗಳ ಕಾಲ ನಿರ್ಬಂಧ ಹೇರಲಾಗಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ. ಶ್ರೀನಗರ ಸೂಕ್ಷ್ಮ ಪ್ರದೇಶಗಳು, ಜಿಲ್ಲಾ ಪ್ರಧಾನ ಕಚೇರಿ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಹಾಗೂ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಇದಲ್ಲದೆ, ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರ ಕಣಿವೆಯಲ್ಲಿ ಇಂಟರ್ನೆಟ್ ಸೇವೆ ಹಾಗೂ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT