ಬಿಜೆಪಿ ಮುಖಂಡ 
ದೇಶ

ತನ್ನ ಪ್ರೀತಿ ಸಾಬೀತುಪಡಿಸಲು ಗುಂಡಿಕ್ಕಿಕೊಂಡ ಬಿಜೆಪಿ ಮುಖಂಡ: ಹೃದಯ, ಅಂಗಾಂಗ ದಾನ

ಬಿಜೆಪಿ ಯುವ ದಳದ ನಾಯಕನೋರ್ವ ತನ್ನ ಪ್ರೀತಿಯನ್ನು ಸಾಬೀತುಪಡಿಸುವ ಸಲುವಾಗಿ ಯುವತಿಯ ಮನೆಯ ಮುಂದೆಯೇ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು...

ಭೋಪಾಲ್: ಬಿಜೆಪಿ ಯುವ ದಳದ ನಾಯಕನೋರ್ವ ತನ್ನ ಪ್ರೀತಿಯನ್ನು ಸಾಬೀತುಪಡಿಸುವ ಸಲುವಾಗಿ ಯುವತಿಯ ಮನೆಯ ಮುಂದೆಯೇ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಆತನ ಹೃದಯ ಸಹಿತ ಅಂಗಾಂಗಗಳನ್ನು ಪೋಷಕರು ದಾನ ಮಾಡಿ ಸಹೃದಯ ಮೆರೆದಿದ್ದಾರೆ. 
30 ವರ್ಷದ ಅತುಲ್ ಲೋಖಂಡೆಗೆ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ತಿಳಿಸಿದ್ದರಿಂದ ಆತನ ಪೋಷಕರು ಅಂಗಾಂಗಗಳನ್ನು ದಾನ ಮಾಡಿದ್ದಾರೆ. 
ಪ್ರೀತಿ ವಿಚಾರವಾಗಿ ಲೋಖಂಡೆಗೆ ತಾನು ಪ್ರೀತಿಸುತ್ತಿದ್ದ 27 ವರ್ಷದ ಯುವತಿಯ ತಂದೆಯೊಂದಿಗೆ ಜಗಳವಾಡಿದ್ದ. ನಂತರ ಜುಲೈ 3ರಂದು ರಾತ್ರಿ ಆತ ಆಕೆಯ ಮನೆಯ ಮುಂದೆಯೇ ತನ್ನನ್ನು ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. 
ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆತನನ್ನು ಪರೀಕ್ಷಿಸಿದ ವೈದ್ಯರು ಅತುಲ್ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ತಿಳಿಸಿದ್ದರಿಂದ ಪೋಷಕರು ಅಂಗಾಂಗಗಳ ದಾನಕ್ಕೆ ದೃಧ ಮನಸ್ಸು ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT