ಸಂಗ್ರಹ ಚಿತ್ರ 
ದೇಶ

ಕೊಲೆ ಆರೋಪಿಗೆ ಹಾರ ಹಾಕಿದ ಮಗನ ತರಾಟೆಗೆ ತೆಗೆದುಕೊಂಡ ಯಶ್ವಂತ್ ಸಿನ್ಹಾ!

ಕೊಲೆ ಆರೋಪಿಗಳಿಗೆ ಹಾರ ಹಾಕಿ ಆಕ್ರೋಶಕ್ಕೆ ತುತ್ತಾಗಿರುವ ಕೇಂದ್ರ ಸಚಿವ ಜಯಂತ್ ಸಿನ್ಹಾ ವಿರುದ್ದ ತಂದೆ ಯಶ್ವಂತ್ ಸಿನ್ಗಾ ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಕೊಲೆ ಆರೋಪಿಗಳಿಗೆ ಹಾರ ಹಾಕಿ ಆಕ್ರೋಶಕ್ಕೆ ತುತ್ತಾಗಿರುವ ಕೇಂದ್ರ ಸಚಿವ ಜಯಂತ್ ಸಿನ್ಹಾ ವಿರುದ್ದ ತಂದೆ ಯಶ್ವಂತ್ ಸಿನ್ಗಾ ಕೂಡ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಯಶ್ವಂತ್ ಸಿನ್ಹಾ ಅವರು, ಮಗನ ಕೃತ್ಯವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಈ ಹಿಂದೆ ನಾನು ಲಾಯಕ್ ಮಗನ ನಾಲಾಯಕ್ ತಂದೆಯಾಗಿದ್ದೆ. ಈಗ ಪಾತ್ರಗಳು ಉಲ್ಟಾ ಆಗಿದ್ದು, ಇದೇ ಟ್ವಿಟರ್ ಮಹಿಮೆ ಎಂದು ವ್ಯಂಗ್ಯ ಮಾಡಿದ್ದಾರೆ.
ಒಂದು ವರ್ಷದ ನಂತರ ಜೂನ್ 29ರಂದು ಜಾರ್ಖಂಡ್ ಹೈ ಕೋರ್ಟ್ 8 ಆರೋಪಿಗಳ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿತ್ತು. ಜೈಲಿನಿಂದ ಜಾಮೀನಿನ ಬಿಡುಗಡೆಯಾದ ಇವರೆಲ್ಲರೂ ಸ್ಥಳಿಯ ಬಿಜೆಪಿ ನಾಯಕರೊಬ್ಬರ ಜತೆ ರಾಂಚಿಯ ಜಯಂತ್ ಸಿನ್ಹಾ ಅವರ ನಿವಾಸಕ್ಕೆ ಭೇಟಿ ಕೊಟ್ಟಾಗ ಸಚಿವರು ಎಲ್ಲರನ್ನೂ ಹಾರ ಹಾಕಿ ಸ್ವಾಗತಿಸಿದ್ದಾರೆ. ಈ ಕುರಿತ ಭಾವಚಿತ್ರಗಳು ಇದೀಗ ವೈರಲ್ ಆಗುತ್ತಿದ್ದು, ಈ ವಿಚಾರ ಮಾಧ್ಯಮಗಳಲ್ಲಿ ಸುದ್ದಿಗೆ ಗ್ರಾಸವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT