ರಾಜ್ಯಸಭಾ ಸದಸ್ಯ ಅಹಮದ್ ಪಟೇಲ್ ಗೆ ಸುಪ್ರೀಂ ಕೋರ್ಟ್ ನೋಟೀಸ್ 
ದೇಶ

ರಾಜ್ಯಸಭಾ ಸದಸ್ಯ ಅಹಮದ್ ಪಟೇಲ್ ಗೆ ಸುಪ್ರೀಂ ಕೋರ್ಟ್ ನೋಟೀಸ್

ಗುಜರಾತಿನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ಅವರಿಗೆ ಸುಪ್ರೀಂ ಕೋರ್ಟ್ ನೋತೀಸ್ ಜಾರಿ ಮಾಡಿದೆ.

ನವದೆಹಲಿ: ಗುಜರಾತಿನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ಅವರಿಗೆ ಸುಪ್ರೀಂ ಕೋರ್ಟ್ ನೋತೀಸ್ ಜಾರಿ ಮಾಡಿದೆ. 
ಅಹಮದ್ ಪಟೇ;ಲ್ ಆಯ್ಕೆಯನ್ನು ರದ್ದುಗೊಳಿಸಲು ಕೋರಿ ಬಿಜೆಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸಂಬಂಧ ಪ್ರತಿಕ್ರಿಯೆ ನೀಡಬೇಕೆಂದು ಪಟೇಲ್ ಅವರಿಗ ನೋಟೀಸ್ ಜಾರಿ ಮಾಡಿದೆ.
ಚುನಾವಣೆ ವೇಳೆ ಶಾಸಕರನ್ನು ಅನಧಿಕೃತವಾಗಿ ಇರಿಸಿಕೊಂಡಿದ್ದಲ್ಲದೆ ಅವರಿಗೆ ಭಯ ಮೂಡಿಸಿ ತಮ್ಮ ಪರವಾಗಿ ಮತ ಹಾಕುವಂತೆ ಮಾಡಲಾಗಿತ್ತು ಎಂದು ಬಿಜೆಪಿ ಮುಖಂಡ ಬಲ್ವಂತ್ ಸಿಂಗ್ ರಜಪೂತ್ ಕೋರ್ಟ್ ಮೆಟ್ಟಿಲೇರಿದ್ದರು. ಅಹಮದ್ ಪಟೇಲ್ ಚುನಾವಣೆ ಅಕ್ರಮ ನಡೆಸಿದ್ದಾರೆಂದು ಅವರು ಆಆರೋಪಿಸಿದ್ದರು.
ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ಪಟೇಲ್ ಅವರಿಗೆ ನೋಟೀಸ್ ನೀಡಿರುವುದಲ್ಲದೆ ಗುಜರಾತ್ ಹೈಕೋರ್ಟ್ ಈ ಸಂಬಂಧ ವಿಚಾರಣೆ ನಡೆಸಬೇಕೆಂದು ಆದೇಶಿಸಿದೆ.
ಕಳೆದ ವರ್ಷ ನಡೆದಿದ್ದ ರಾಜ್ಯ ಸಭೆ ಚುನಾವಣೆಯಲ್ಲಿ ಗುಜರಾತಿನಿಂದ ಸ್ಪರ್ಧಿಸಿದ್ದ ಅಹಮದ್ ಪಟೇಲ್ಲ್ 44 ಮತಗಳನ್ನು ಪಡೆದು ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT