ಸುಪ್ರೀಂ ತೀರ್ಪು ನ್ಯಾಯಾಂಗದ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ: ನಿರ್ಭಯಾ ತಾಯಿ ಆಶಾದೇವಿ 
ದೇಶ

ಸುಪ್ರೀಂ ತೀರ್ಪು ನ್ಯಾಯಾಂಗದ ಮೇಲಿನ ವಿಶ್ವಾಸವನ್ನು ಹೆಚ್ಚಿಸಿದೆ: ನಿರ್ಭಯಾ ತಾಯಿ ಆಶಾದೇವಿ

ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಿಗೆ ಗಲ್ಲು ಶಿಕ್ಷೆ ಖಾಯಂ ಮಾಡಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ್ದು ಈ ತೀರ್ಪು ನ್ಯಾಯಾಂಗದ ಮೇಲಿನ ನಮ್ಮ ನಂಬಿಕೆಯನ್ನು ದೃಢಪಡಿಸಿದೆ....

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಿಗೆ ಗಲ್ಲು ಶಿಕ್ಷೆ ಖಾಯಂ ಮಾಡಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ್ದು ಈ ತೀರ್ಪು ನ್ಯಾಯಾಂಗದ ಮೇಲಿನ ನಮ್ಮ ನಂಬಿಕೆಯನ್ನು ದೃಢಪಡಿಸಿದೆ  ಎಂದು ನಿರ್ಭಯಾ ತಾಯಿ ಹೇ:ಳಿದ್ದಾರೆ
ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು.ನಿರ್ಭಯಾ ಅವರ ತಾಯಿ ಆಶಾ ದೇವಿ ಹೇಳಿದ್ದು "ನಮ್ಮ ಹೋರಾಟವು ಇಲ್ಲಿಗೆ ಕೊನೆಗೊಳ್ಳುವುದಿಲ್ಲ.ಈ ತೀರ್ಪು ವಿಳಂಬವಾದದ್ದರಿಂದ ದೇಶದ ಇತರೆ ಹೆಣ್ಣುಮಕ್ಕಳ ಮೇಲೆ ಇದು ಪರಿಣಾಮಬೀರಿದೆ.ನಾನು ನಿರ್ಭಯಾಳಂತೆಯೇ ಇತರೆ ಮಹಿಳೆಯರಿಗೆ ಸಹ ಬೇಗ ನ್ಯಾಯ ದೊರಕಬೇಕೆಂದು ಒತ್ತಾಯಿಸುತ್ತೇನೆ. ಈ ಸಂಬಂಧ ನ್ಯಾಯಾಂಗ ವ್ಯವಸ್ಥೆ ಬಿಗಿಯಾಗಬೇಕೆಂದು ನಾನು ಬಯ್ಸುತ್ತೇನೆ" ಅವರು ಹೇಳಿದರು.
"ಅವರು ಬಾಲಾಪರಾಧಿಗಳಾಗಿರಲಿಲ್ಲ ಆದರೆ ಇಂತಹಾ ಕೃತ್ಯ ಎಸಗಿರುವುದು ದುರದೃಷ್ಟಕರ"
ಇದೇ ವೇಳೆ ಮಾತನಾಡಿದ ಗ್ಯಾಂಗ್ ರೇಪ್ ಆರೋಪಿಯೊಬ್ಬನ ತಂದೆ ಬದ್ರಿನಾಥ್ ಸಿಂಗ್ ಮರುಪರಿಶೀಲನೆ ಅರ್ಜಿ ವಜಾ ಆಗಿದೆ ಎನ್ನುವುದು ನಮಗೆ ತಿಳಿದಿದೆ, ಮುಂದೇನು? ಇದಾಗಲೇ ಬಹಳ ಸಮಯ ಸಂದಿದೆ, ಮಹಿಳೆಯರಿಗೆ ಬೆದರಿಕೆಗಳು ಇನ್ನಷ್ಟು ಹೆಚ್ಚಿದೆ, ಅವರು ಆದಷ್ಟು ಬೇಗ ನೇಣುಗಂಬವೇರಲಿದ್ದಾರೆ ಎಂದು ನಾನು ಭಾವಿಸುತ್ತೇನೆ. ಇದೇ ಸರಿಯಾದದ್ದು" ಎಂದರು.
2012 ರಲ್ಲಿ ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ 23 ವರ್ಷ ವಯಸ್ಸಿನ ಯುವತಿ ಮೇಲೆ ಐವರು ಪುರುಷರ ಗುಂಪು ಅತ್ಯಾಚಾರ ನಡೆಸಿತ್ತು. ಘಟನೆ ನಡೆದ 13 ದಿನಗಳ ಬಳಿಕ ಸಂತ್ರಸ್ತೆ ಆಸ್ಪತ್ರೆಯಲ್ಲಿ ಮೃತಳಾಗಿದ್ದಳು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT