ನವದೆಹಲಿ: ಒಂದು ದೇಶ, ಒಂದು ಚುನಾವಣೆ (ಏಕಕಾಲಕ್ಕೇ ಲೋಕಸಭೆ, ವಿಧಾನಸಭೆ ಚುನಾವಣೆ)ಯಿಂದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯಾಗುತ್ತದೆ ಎಂದು ಕೇಂದ್ರ ಕಾನೂನು ಆಯೋಗ ಅಭಿಪ್ರಾಯಪಟ್ಟಿದೆ.
ದೆಹಲಿಯಲ್ಲಿ ನಡೆದ ಕಾನೂನು ಆಯೋಗದ ರಾಜಕೀಯ ಪಕ್ಷಗಳ ಸಭೆ ಬಳಿಕ ಆಯೋಗದ ತಜ್ಞರು ಇಂತಹ ಅಭಿಪ್ರಾಯಕ್ಕೆ ಬಂದಿದ್ದು, ಒಂದು ದೇಶ, ಒಂದು ಚುನಾವಣೆ (ಏಕಕಾಲಕ್ಕೇ ಲೋಕಸಭೆ, ವಿಧಾನಸಭೆ ಚುನಾವಣೆ)ಯಿಂದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯಾಗುತ್ತದೆ ಎಂದು ಹೇಳಿದೆ.
ಈ ಬಗ್ಗೆ ಸತತ ಎರಡನೇ ದಿನ ದೆಹಲಿಯಲ್ಲಿ ನಡೆದ ಸಭೆಗೂ ದೇಶದ ಅತೀ ದೊಡ್ಡ ರಾಜಕೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಗೈರಾಗುವ ಮೂಲಕ ಇತರೆ ರಾಜಕೀಯ ಪಕ್ಷಗಳ ಕೆಂಗಣ್ಣಿಗೆ ದೇಶದ ಅತೀ ದೊಡ್ಡ ರಾಷ್ಟ್ರೀಯ ಪಕ್ಷಗಳು ತುತ್ತಾಗಿವೆ. ಕೇಂದ್ರದಲ್ಲಿ ಆಡಳಿತ ರಚನೆ ಮಾಡಿರುವ ಬಿಜೆಪಿ ಹಾಗೂ ಪ್ರಮುಖ ವಿಪಕ್ಷ ಕಾಂಗ್ರೆಸ್ ನಡೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಜೆಡಿಎಸ್. ಟಿಆರ್ ಎಸ್. ಡಿಎಂಕೆ ಸೇರಿದಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ಹಲವು ಪಕ್ಷಗಳು ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಟೀಕಿಸಿವೆ.
ದೇಶದಲ್ಲಿ ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಚುನಾವಣೆ ನಡೆಸಬೇಕು ಎಂದರೆ ಕೆಲ ರಾಜ್ಯಗಳಲ್ಲಿ ಅವಧಿ ಪೂರ್ವ ಚುನಾವಣೆ ನಡೆಯಬೇಕು ಮತ್ತು ಮತ್ತೆ ಕೆಲವು ರಾಜ್ಯಗಳಲ್ಲಿ ತಡವಾಗಿ ಚುನಾವಣೆ ನಡೆಸಬೇಕು. ಇವೆರಡಕ್ಕೂ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಒಪ್ಪುವುದಿಲ್ಲ ಎಂದು ಟಿಆರ್ ಎಸ್ ಕಿಡಿಕಾರಿದೆ.
ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಜೆಡಿಎಸ್ ಪಕ್ಷದ ಪ್ರತಿನಿಧಿ ಡ್ಯಾನಿಷ್ ಅಲಿ ಅವರು, ಒಂದು ದೇಶ, ಒಂದು ಚುನಾವಣೆ ಕುರಿತಂತೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಬೇಕು. ಸಂವಿಧಾನ, ಪ್ರಜಾಪ್ರಭುತ್ವವನ್ನು ಬಲಪಡಿಸುವ ಕುರಿತು ಕೇಂದ್ರ ಸರ್ಕಾರ ಕಾರ್ಯಪ್ರವೃತ್ತವಾಗಿದ್ದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಲಿ ಎಂದು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos