ಹತ್ಯೆಯಾದ ಗ್ಯಾಂಗ್'ಸ್ಟರ್ ಭಜರಂಗಿ, ಸುನಿಲ್ ರಥಿ ನಡುವೆ ವೈಷಮ್ಯವಿತ್ತು; ಜೈಲರ್ 
ದೇಶ

ಹತ್ಯೆಯಾದ ಗ್ಯಾಂಗ್'ಸ್ಟರ್ ಭಜರಂಗಿ, ಸುನಿಲ್ ರಥಿ ನಡುವೆ ವೈಷಮ್ಯವಿತ್ತು; ಜೈಲರ್

ಹತ್ಯೆಯಾದ ಗ್ಯಾಂಗ್ ಸ್ಟರ್ ಪ್ರೇಮ್ ಪ್ರಕಾಶ್ ಸಿಂಗ್ ಅಲಿಯಾಸ್ ಮುನ್ನಾ ಭಜರಂಗಿ ಹಾಗೂ ಸುನಿಲ್ ರಥಿ ನಡುವೆ ವೈಷಮ್ಯಗಳಿದ್ದವು ಎಂದು ಜೈಲಿನ ಅಧಿಕಾರಿಗಳು ಸೋಮವಾರ ಹೇಳಿದ್ದಾರೆ...

ಲಖನೌ: ಹತ್ಯೆಯಾದ ಗ್ಯಾಂಗ್ ಸ್ಟರ್ ಪ್ರೇಮ್ ಪ್ರಕಾಶ್ ಸಿಂಗ್ ಅಲಿಯಾಸ್ ಮುನ್ನಾ ಭಜರಂಗಿ ಹಾಗೂ ಸುನಿಲ್ ರಥಿ ನಡುವೆ ವೈಷಮ್ಯಗಳಿದ್ದವು ಎಂದು ಜೈಲಿನ ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. 
ಮುನ್ನಾ ಭಜರಂಗಿ ಹತ್ಯೆ ಪ್ರಕರಣ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜೈಲರ್, ಸುನಿಲ್ ಹಾಗೂ ಭಜರಂಗಿ ನಡುವೆ ವೈಷಮ್ಯಗಳಿದ್ದವು. ಈ ಹಿನ್ನಲೆಯಲ್ಲಿ ಸುನಿಲ್ ರಥಿ, ಭಜರಂಗಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಪ್ರಕರಣ ಸಂಬಂಧ ವಾರ್ಡನ್ ಹಾಗೂ ಮುಖ್ಯ ವಾರ್ಡನ್ ಗಳನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ. 
ಪ್ರಕರಣ ಸಂಬಂಧ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ. 
ಕಳೆದ ರಾತ್ರಿಯಷ್ಟೇ ಭಜರಂಗಿಯನ್ನು ಝಾನ್ಸಿಯಿಂದ ಬಾಘ್'ಪತ್ ಜೈಲಿಗೆ ಕರೆತರಲಾಗಿತ್ತು. ಇಂದು ಬೆಳಿಗ್ಗೆ ಸಹ ಕೈದಿ ಭಜರಂಗಿಯನ್ನು ಗುಂಡಿಟ್ಟು ಹತ್ಯೆ ಮಾಡಿ, ಪಿಸ್ತೂಲ್'ನ್ನು ಬಚ್ಚಿಟ್ಟಿದ್ದ. ಮುನ್ನಾ ಭಜರಂಗಿ ಜೀವಕ್ಕೆ ಅಪಾಯವಿದೆ ಎಂದು ಕೆಲಸ ದಿನಗಳ ಹಿಂದಷ್ಟೇ ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿತ್ತು ಎಂದು ಗ್ಯಾಂಗ್'ಸ್ಟರ್ ಪರ ವಕೀಲ ವಿ. ಶ್ರೀವಾತ್ಸವ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT