ಗ್ಯಾಂಗ್'ಸ್ಟರ್ ಮುನ್ನಾ ಭಜರಂಗಿ 
ದೇಶ

ಉತ್ತರಪ್ರದೇಶ: ಜೈಲಿನಲ್ಲಿ ಕುಖ್ಯಾತ ಗ್ಯಾಂಗ್'ಸ್ಟರ್ ಮುನ್ನಾ ಭಜರಂಗಿ ಗುಂಡಿಟ್ಟು ಹತ್ಯೆ

ಕುಖ್ಯಾತ ಗ್ಯಾಂಗ್'ಸ್ಟರ್ ಮತ್ತು ಮಾಫಿಯಾ ಡಾನ್ ಪ್ರೇಮ್ ಪ್ರಕಾಶ್ ಸಿಂಗ್ ಅಲಿಯಾಸ್ ಮುನ್ನಾ ಭಜರಂಗಿಯನ್ನು ಉತ್ತರಪ್ರದೇಶದ ಬಾಘ್'ಪತ್ ಜಿಲ್ಲಾ ಕಾರಾಗೃಹದಲ್ಲಿ ಹತ್ಯೆಯಾಗಿದೆ ಎಂದು ಸೋಮವಾರ ತಿಳಿದುಬಂದಿದೆ...

ಲಖನೌ: ಕುಖ್ಯಾತ ಗ್ಯಾಂಗ್'ಸ್ಟರ್ ಮತ್ತು ಮಾಫಿಯಾ ಡಾನ್ ಪ್ರೇಮ್ ಪ್ರಕಾಶ್ ಸಿಂಗ್ ಅಲಿಯಾಸ್ ಮುನ್ನಾ ಭಜರಂಗಿಯನ್ನು ಉತ್ತರಪ್ರದೇಶದ ಬಘ್'ಪತ್ ಜಿಲ್ಲಾ ಕಾರಾಗೃಹದಲ್ಲಿ ಹತ್ಯೆಯಾಗಿದೆ ಎಂದು ಸೋಮವಾರ ತಿಳಿದುಬಂದಿದೆ. 
ಝಾನ್ಸಿ ಜೈಲಿನಲ್ಲಿದ್ದ ಭಜರಂಗಿಯನ್ನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದಷ್ಟೇ ಬಘ್'ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು. 
ಪ್ರಸ್ತುತ ಹತ್ಯೆಯಾಗಿರುವ ಗ್ಯಾಂಗ್'ಸ್ಟರ್ ಭಜರಗಿಂದ ಬಿಜೆಪಿ ಹಿರಿಯ ನಾಯಕ ಕೃಷ್ಣಾನಂದ್ ರೈ ಅವರ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. 
ಸ್ಥಳೀಯ ನ್ಯಾಯಾಲಯವೊಂದಕ್ಕೆ ಕರೆದೊಯ್ಯುವ ಸಲುವಾಗಿ ಭಜರಂಗಿಯನ್ನು ಪೊಲೀಸ್ ವಾಹನದಲ್ಲಿರಿಸಲಾಗಿತ್ತು. ಈ ವೇಳೆ ಸುನೀಲ್ ರಥಿ ಎಂಬ ಮತ್ತೊಬ್ಬ ಆರೋಪಿ ಭಜರಂಗಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹದ ಹೆಚ್ಚುವರಿ ಐಜಿಪಿ ತನಿಖೆಗೆ ಆದೇಶಿಸಿದ್ದು, ತನಿಖೆ ಪ್ರಗತಿಯಲ್ಲಿದೆ. 
ಜೈಲಿನ ಸಹ ಕೈದಿಯ ಬಳಿಕ ಗನ್ ಹೇಗೆ ಬಂದಿತ್ತು ಸಿಕ್ಕಿತು ಎಂಬ ಪ್ರಶ್ನೆ ಇದೀಗ ಹಲವು ಅನುಮಾನಗಳಿಗೆ ಏಡೆ ಮಾಡಿಕೊಟ್ಟಿದೆ. 
ಇತ್ತೀಚೆಗಷ್ಟೇ ಭಜರಂಗಿ ಪತ್ನಿ ಸೀಮಾ ಸಿಂಗ್ ಅವರು, ಉತ್ತರಪ್ರದೇಶದ ವಿಶೇಷ ಪೊಲೀಸರು ಜೈಲಿನಲ್ಲಿಯೇ ನನ್ನ ಪತಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬು ಆರೋಪ ಮಾಡಿದ್ದರು. ಅಲ್ಲದೆ, ಈ ವಿಚಾರವನ್ನು ನ್ಯಾಯಾಲಯ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರ ಗಮನಕ್ಕೆ ತರುವುದಾಗಿಯೂ ತಿಳಿಸಿದ್ದರು. ಇದರ ಬೆನ್ನಲ್ಲೇ ಜೈಲಿನಲ್ಲಿಯೇ ಭಜರಂಗಿಯನ್ನು ಹತ್ಯೆ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT