ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ 
ದೇಶ

ಏರ್'ಸೆಲ್ ಮ್ಯಾಕ್ಸಿಸ್ ಹಗರಣ: ಆ.7ವರೆಗೆ ಚಿದಂಬರಂ, ಕಾರ್ತಿರನ್ನು ಬಂಧಿಸುವಂತಿಲ್ಲ; ದೆಹಲಿ ನ್ಯಾಯಾಲಯ

ಏರ್'ಸೆಲ್ ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಆ.7ರವರೆಗೂ ಬಂಧಿಸುವಂತಿಲ್ಲ ಎಂದು ದೆಹಲಿಯ ಪಾಟಿಯಾಲಾ ಹೌಸ್ ನ್ಯಾಯಾಲಯ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ...

ನವದೆಹಲಿ: ಏರ್'ಸೆಲ್ ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಆ.7ರವರೆಗೂ ಬಂಧಿಸುವಂತಿಲ್ಲ ಎಂದು ದೆಹಲಿಯ ಪಾಟಿಯಾಲಾ ಹೌಸ್ ನ್ಯಾಯಾಲಯ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. 
ಪ್ರಕರಣ ಕುರಿತಂತೆ ಕಳೆದ ಜೂನ್ 5 ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ಜುಲೈ.10ವರೆರೆಗೆ ಚಿದಂಬಂರಂ ಅವರನ್ನು ಬಂಧಿಸುವಂತಿಲ್ಲ ಎಂದು ಮಧ್ಯಂತರ ಆದೇಶ ಹೊರಡಿಸಿತ್ತು. 
ಮಧ್ಯಂತರ ಆದೇಶ ಇಂದಿಗೆ ಅಂತ್ಯವಾದ ಹಿನ್ನಲೆಯಲ್ಲಿ ಇಂದು ಪ್ರಕರಣ ಕುರಿತಂತೆ ವಿಚಾರಣೆ ನಡೆಸಿರುವ ನ್ಯಾಯಾಲಯ, ಮತ್ತೆ ಚಿದಂಬರಂ ಹಾಗೂ ಕಾರ್ತಿಯವರಿಗೆ ಆ.7ರವರೆಗೂ ನಿರಾಳ ನೀಡಿದೆ. 
ಏರ್'ಸೆಲ್ ಮ್ಯಾಕ್ಸಿಸ್ ಪ್ರಕರಣವು 2ಜಿ ಸ್ಪೆಕ್ಟ್ರಂ ಪ್ರಕರಣದಿಂದ ಹೊರಬಂದ ಹಗರಣವಾಗಿದೆ. ಏರ್'ಸೆಲ್'ಗೆ ಹೂಡಿಕೆ ಮಾಡಲು ಎಂ/ಎಸ್ ಗ್ಲೋಬರ್ ಕಮ್ಯುನಿಕೇಷನ್ ಹೋಲ್ಡಿಂಗ್ ಸರ್ವೀಸಸ್ ಲಿಮಿಟೆಡ್'ಗೆ ಫಾರಿನ್ ಇನ್ವೆಸ್ಟ್ ಮೆಂಟ್ ಬೋರ್ಡ್ ಸಮ್ಮತಿ ನೀಡಿದ್ದ ಆರೋಪ ಪ್ರಕರಣ ಇದಾಗಿದ್ದು, 2006ರಲ್ಲಿ ನಡೆದ ರೂ.600 ಕೋಟಿಯ ಈ ವ್ಯವಹಾರದ ಹಿಂದೆ ಪಿ.ಚಿದಂಬರಂ ಅವರ ಕೈವಾಡವಿದೆ ಎಂದು ಜಾರಿ ನಿರ್ದೇಶನಾಲಯ ಆರೋಪ ಮಾಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT