ಸಾಂದರ್ಭಿಕ ಚಿತ್ರ 
ದೇಶ

ಬಿಹಾರ; ಆರ್'ಜೆಡಿ ನಾಯಕನ ತಲೆಕಡಿದು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ರಾಷ್ಟ್ರೀಯ ಜನತಾ ದಳ (ಆರ್'ಜೆಡಿ) ನಾಯಕರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಬಿಹಾರ ರಾಜ್ಯದ ನವಡಾ ಪ್ರದೇಶದಲ್ಲಿ ನಡೆದಿದೆ...

ಪಾಟ್ನಾ; ರಾಷ್ಟ್ರೀಯ ಜನತಾ ದಳ (ಆರ್'ಜೆಡಿ) ನಾಯಕರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಬಿಹಾರ ರಾಜ್ಯದ ನವಡಾ ಪ್ರದೇಶದಲ್ಲಿ ನಡೆದಿದೆ. 
ಕೈಲಾಶ್ ಪಾಸ್ವಾನ್ ಹತ್ಯೆಯಾದ ಆರ್'ಜೆಡಿ ನಾಯಕರಾಗಿದ್ದಾರೆ, ಪಾಸ್ವಾನ್ ಅವರು ಆರ್'ಜೆಡಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. 
ಪಾಸ್ವಾನ್ ಅವರ ಮೃತದೇಹವನ್ನು ಪೊಲೀಸರು ನಳಂದಾ ಜಿಲ್ಲೆಯ ಖುದಗಂಜ್ ಪ್ರದೇಶದಲ್ಲಿರುವ ಪೈಮರ್ ನದಿ ಬಳಿಯಿರುವ ಸೇತೆ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪಾಸ್ವಾನ್ ಅವರ ಕುಟುಂಬಸ್ಥರು, ಪಂಚಾಯತ್ ಸಭೆಗಾಗಿ ಬುಚ್ಛಿ ಎಂಬ ಗ್ರಾಮಕ್ಕೆ ಛೋಟೂ ಗುಪ್ತಾ ಎಂಬ ವ್ಯಕ್ತಿ ಜು.6 ರಂದು ಪಾಸ್ವಾನ್ ಅವರನ್ನು ಕರೆದುಕೊಂಡು ಹೋಗಿದ್ದ. ಇದಾದ ಬಳಿಕ ಪಾಸ್ವಾನ್ ಅವರು ಮತ್ತೆ ಮನೆಗೆ ಹಿಂತಿರುಗಿರಲಿಲ್ಲ. ನಾಪತ್ತೆಯಾದ ಬಳಿಕ ಸಾಕಷ್ಟು ಹುಡುಕಾಟ ನಡೆಸಲಾಯಿತು. ಆದರೆ, ಎಲ್ಲಿಯೂ ಪತ್ತೆಯಾಗಿರಲಿಲ್ಲ. ನಂತರ ಪಾಸ್ವಾನ್ ಅವರ ಪುತ್ರ ಸಂಜಯ್ ಛೋಟು ಗುಪ್ತಾ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿದ್ದ ಎಂದು ಹೇಳಿದ್ದಾರೆ. 
ನಳಂದಾ ಬಳಿ ಮೃತದೇಹ ಪತ್ತೆಯಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದರು. ಕೂಡಲೇ ನಾಗರೀಕ ಆಸ್ಪತ್ರೆಗೆ ತೆರಳಿ, ದೇಹದ ಆಕಾರ ಹಾಗೂ ಬಟ್ಟೆಗಳನ್ನು ನೋಡಿ ಗುರುತು ಹಿಡಿಯಲಾಯಿತು ಎಂದು ಸಂಬಂಧಿಕರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT