ಸುಪ್ರೀಂ ಕೋರ್ಟ್ 
ದೇಶ

ವಿವಾಹೇತರ ಸಂಬಂಧಕ್ಕೆ ಶಿಕ್ಷೆ ನೀಡುವ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದ್ದೇನು ಗೊತ್ತೇ?

ವಿವಾಹದ ಪಾವಿತ್ರ್ಯತೆ ಉಳಿಯಬೇಕಾದರೆ ವಿವಾಹೇತರ ಸಂಬಂಧ ಶಿಕ್ಷಾರ್ಹವಾಗಿರಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ.

ನವದೆಹಲಿ: ವಿವಾಹದ ಪಾವಿತ್ರ್ಯತೆ ಉಳಿಯಬೇಕಾದರೆ ವಿವಾಹೇತರ ಸಂಬಂಧ ಶಿಕ್ಷಾರ್ಹವಾಗಿರಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ. 
ವಿವಾಹೇತರ ಸಂಬಂಧ ಪ್ರಕರಣದಲ್ಲಿ ಪುರುಷ ಹಾಗೂ ಮಹಿಳೆ ಇಬ್ಬರನ್ನೂ ಸಮಾನ ಹೊಣೆಗಾರರು ಎಂದು ಪರಿಗಣಿಸಬೇಕೆಂಬ ಜೋಸೆಫ್ ಶೈನ್ ಅರ್ಜಿಗೆ ವಿರುದ್ಧವಾಗಿ ಪ್ರಮಾಣ ಪತ್ರ ಸಲ್ಲಿಸಿರುವ ಕೇಂದ್ರ ಸರ್ಕಾರ ವಿವಾಹೇತರ ಸಂಬಂಧ ಶಿಕ್ಷಾರ್ಹವಾಗಿರಬೇಕು ಎಂದು ವಾದಿಸಿದೆ. 
ವಿವಾಹದ ಪಾವಿತ್ರ್ಯತೆಯನ್ನು ಉಳಿಸುವುದಕ್ಕಾಗಿ ಐಪಿಸಿ ಸೆಕ್ಷನ್ 497 ರ ಪ್ರಕಾರ ವಿವಾಹೇತರ ಸಂಬಂಧವನ್ನು ಶಿಕ್ಷಾರ್ಹಗೊಳಿಸಲಾಗಿತ್ತು. 
ಅದನ್ನು ದುರ್ಬಲಗೊಳಿಸುವುದರಿಂದ ಈಗ ವಿವಾಹದ ಪಾವಿತ್ರ್ಯತೆಯನ್ನೇ ಕಳೆದಂತಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.  ವಿವಾಹೇತರ ಸಂಬಂಧಕ್ಕೆ ಸಂಬಂಧಿಸಿದಂತೆ ಜಾರಿಯಲ್ಲಿರುವ 157 ವರ್ಷಗಳ ಹಿಂದಿನ ಬ್ರಿಟನ್ ಕಾಲದ ಕಾನೂನಿನ ಪ್ರಕಾರ ವಿವಾವಾಗಿರುವ ಪುರುಷ, ಮತ್ತೋರ್ವ ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರೆ ಪುರುಷನಿಗೆ 5 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ. ಆದರೆ ಪುರುಷರಿಗೆ ಮಾತ್ರ ಶಿಕ್ಷೆ ನೀಡುವ ಈ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ 2018ರ ಜನವರಿಯಲ್ಲಿ 5 ಸದಸ್ಯರ ಸಾಂವಿಧಾನಿಕ ಪೀಠಕ್ಕೆ ಈ ವಿಚಾರಣೆಯನ್ನು ವರ್ಗಾಯಿಸಿತ್ತು. 
ಪರ ಪುರುಷನ ಪತ್ನಿಯೊಂದಿಗೆ ಮತ್ತೋರ್ವ ವಿವಾಹಿತ ಪುರುಷ ಲೈಂಗಿಕ ಸಂಬಂಧ ಹೊಂದಿದ್ದರೆ ಅದು ಅತ್ಯಾಚಾರವಾಗುವುದಿಲ್ಲ, ಬದಲಾಗಿ ವ್ಯಭಿಚಾರವಾಗುತ್ತದೆ, ಈ ರೀತಿಯ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾದ ಪುರುಷನಿಗೆ ಐಪಿಸಿ ಸೆಕ್ಷನ್ 497 ರ ಪ್ರಕಾರ  5 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆದರೆ ಇದಕ್ಕೆ ಉತ್ತೇಜನ ನೀಡಿದ್ದಕ್ಕಾಗಿ ಮಹಿಳೆಗೆ ಶಿಕ್ಷೆ ವಿಧಿಸುವಂತಿಲ್ಲ. ಸೆಕ್ಷನ್ 497 ರಲ್ಲಿರುವ ಈ ಅಂಶವನ್ನು ಪ್ರಶ್ನಿಸಿ ಜೋಸೆಫ್ ಶೈನ್ ಅರ್ಜಿ ಸಲ್ಲಿಸಿದ್ದರು. 
ಅಷ್ಟೇ ಅಲ್ಲದೇ ಸಿಆರ್ ಪಿಸಿ ಸೆಕ್ಷನ್ 198 ರ ಪ್ರಕಾರ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಪತಿಗೆ ದೂರು ನೀಡಲು ಅವಕಾಶವಿದ್ದು, ಅಕ್ರಮ ಸಂಬಂಧ ಹೊಂದಿದ್ದ ಪುರುಷನ ಪತ್ನಿಗೆ ಈ ಅವಕಾಶ ಇಲ್ಲದಿರುವುದನ್ನೂ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.  1954 ರಲ್ಲಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದ್ದ ಸುಪ್ರೀಂ ಕೋರ್ಟ್ ಸೆಕ್ಷನ್ 497 ನ್ನು ಎತ್ತಿ ಹಿಡಿದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT