ಸಂಗ್ರಹ ಚಿತ್ರ 
ದೇಶ

ಲೆಫ್ಟಿನೆಂಟ್ ಗವರ್ನರ್ ರಿಂದ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ: ಮನೀಷ್ ಸಿಸೋಡಿಯಾ

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದ್ದು, ಸರ್ಕಾರದ ಗಮನಕ್ಕೆ ತರದೇ ನೇಮಕಾತಿ ಮಾಡಿದ್ದಾರೆ ಎಂದು ದೆಹಲಿ ಸಚಿವ ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರು ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದ್ದು, ಸರ್ಕಾರದ ಗಮನಕ್ಕೆ ತರದೇ ನೇಮಕಾತಿ ಮಾಡಿದ್ದಾರೆ ಎಂದು ದೆಹಲಿ ಸಚಿವ ಮನೀಷ್ ಸಿಸೋಡಿಯಾ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಹೊರತಾಗಿಯೂ ಲೆಫ್ಟಿನೆಂಟ್ ಗವರ್ನರ್ ಶಿಕ್ಷಣ ಇಲಾಖೆಯ ನಿರ್ದೇಶಕರುಗಳನ್ನು ನೇಮಕ ಮಾಡಿರುವುದು ಅಕ್ರಮ. ರಾಜ್ಯದಲ್ಲಿ ಅನಿಲ್ ಬೈಜಲ್ ಅವರು ದಾದಾಗಿರಿಯ ಆಡಳಿತ ನಡೆಸುತ್ತಿದ್ದು, ಜನರು ಆರಿಸಿದ ಸರ್ಕಾರಕ್ಕೆ ಲೆಫ್ಟಿನೆಂಟ್ ಗವರ್ನರ್ ಅಗೌರವ ತೋರಿದ್ದಾರೆ. ಒಂದು ಪ್ರಮುಖ ಸ್ಥಾನಕ್ಕೆ ಸರ್ಕಾರದೊಂದಿಗೆ ಚರ್ಚಿಸದೇ ಲೆಫ್ಟಿನೆಂಟ್ ಗವರ್ನರ್ ನೇಮಕ ಮಾಡಿರುವುದು ಸರಿಯಲ್ಲ. ಸರ್ಕಾರ ಶಿಕ್ಷಣ ಇಲಾಖೆಗೆ ಶೇ.26ರಷ್ಟು ಅನುದಾನ ನೀಡುತ್ತಿದೆ. ಹೀಗಿದ್ದು ಬೈಜಲ್ ಅವರ ನಿರ್ಧಾರ ಏಕಪಕ್ಷೀಯವಾದದ್ದು. ಇದು ಸ್ಪಷ್ಟವಾಗಿ ಸುಪ್ರೀಂ ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.
ಕಳೆದ ವಾರವಷ್ಟೇ ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವಿನ ತಿಕ್ಕಾಟಕ್ಕೆ ತೆರೆ ಎಳೆದಿದ್ದ ಸುಪ್ರೀಂ ಕೋರ್ಟ್, ಸರ್ಕಾರ ಮತ್ತು ಗವರ್ನರ್ ಕಚೇರಿ ಸಾಮರಸ್ಯ ಸೌಹಾರ್ಧಸಂಬಂಧ ಹೊಂದಿರಬೇಕು. ಪರಸ್ಪರ ಒಗ್ಗೂಡಿ ನಿರ್ಧಾರ ಕೈಗೊಳ್ಳಬೇಕು. ಅಂತೆಯೇ ದೆಹಲಿಗೆ ಸಾಮಾನ್ಯ ರಾಜ್ಯ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT