ಕೊಲೆ ಅಪರಾಧಿಗಳಿಗೆ ಹಾರ ಹಾಕಿದ ಜಯಂತ್ ಸಿನ್ಹಾ 
ದೇಶ

ಹತ್ಯೆ ಅಪರಾಧಿಗಳಿಗೆ ಹಾರ: ಕೇಂದ್ರ ಸಚಿವ ಜಯಂತ್ ಸಿನ್ಹಾ 'ವಿಷಾದ'

ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ 8 ಅಪರಾಧಿಗಳಿಗೆ ಹಾರ ಹಾಕಿ ಸನ್ಮಾನ ಮಾಡುವ ಮೂಲಕ ತೀವ್ರ ಟೀಕೆಗೆ ಗುರಿಯಾಗಿದ್ದ...

ನವದೆಹಲಿ: ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ 8 ಅಪರಾಧಿಗಳಿಗೆ ಹಾರ ಹಾಕಿ ಸನ್ಮಾನ ಮಾಡುವ ಮೂಲಕ ತೀವ್ರ ಟೀಕೆಗೆ ಗುರಿಯಾಗಿದ್ದ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಜಯಂತ್‌ ಸಿನ್ಹಾ ಅವರು ಬುಧವಾರ ವಿಷಾದ ವ್ಯಕ್ತಪಡಿಸಿದ್ದಾರೆ.
ಪ್ರಕರಣ ನ್ಯಾಯಾಲಯದಲ್ಲಿದ್ದು, ಆ ಬಗ್ಗೆ ನಾವು ಮಾತನಾಡುವುದು ಸರಿಯಲ್ಲ ಎಂದು ನಾನು ಹಲವು ಬಾರಿ ಹೇಳಿದ್ದೇನೆ. ಕಾನೂನು ಕ್ರಮ ತೆಗೆದುಕೊಳ್ಳಲದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಅಮಾಯಕರಿಗೆ ಶಿಕ್ಷೆಯಾಗಬಾರದು ಎಂದು ನಾವು ಸದಾ ಕೆಲಸ ಮಾಡುತ್ತೇವೆ. ನಾನು ಆರೋಪಿಗಳಿಗೆ ಹಾರ ಹಾಕುವುದರಿಂದ ಹತ್ಯೆಗೆ ಬೆಂಬಲ ನೀಡಿದಂತಾಗುತ್ತದೆ ಎನ್ನುವದಾದರೆ, ಆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.
ಅಲಿಮುದ್ದೀನ್ ಅನ್ಸಾರಿ ಎಂಬ ದನಗಳ ವ್ಯಾಪಾರಿಯ ಹತ್ಯೆ ಆರೋಪದಲ್ಲಿ ಶಿಕ್ಷೆಗೊಳಗಾಗಿರುವ ವ್ಯಕ್ತಿಗಳಿಗೆ ಜಯಂತ್‌ ಸಿನ್ಹಾ ಸನ್ಮಾನ ಮಾಡಿದ ಫೋಟೋ ಜುಲೈ 6ರಂದು ವೈರಲ್ ಆಗಿತ್ತು.
ಸಿನ್ಹಾ ಸನ್ಮಾನಕ್ಕೆ ಪ್ರತಿಪಕ್ಷಗಳಿಂದ ಮಾತ್ರವಲ್ಲದೆ ಸ್ವಪಕ್ಷ ಮತ್ತು ಅವರ ತಂದೆ ಯಶವಂತ್ ಸಿನ್ಹಾ ಅವರಿಂದಲೂ ತೀವ್ರ ವಿರೋಧ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT