ಕೊಲೆ ಅಪರಾಧಿಗಳಿಗೆ ಹಾರ ಹಾಕಿದ ಜಯಂತ್ ಸಿನ್ಹಾ 
ದೇಶ

ಹತ್ಯೆ ಅಪರಾಧಿಗಳಿಗೆ ಹಾರ: ಕೇಂದ್ರ ಸಚಿವ ಜಯಂತ್ ಸಿನ್ಹಾ 'ವಿಷಾದ'

ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ 8 ಅಪರಾಧಿಗಳಿಗೆ ಹಾರ ಹಾಕಿ ಸನ್ಮಾನ ಮಾಡುವ ಮೂಲಕ ತೀವ್ರ ಟೀಕೆಗೆ ಗುರಿಯಾಗಿದ್ದ...

ನವದೆಹಲಿ: ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ 8 ಅಪರಾಧಿಗಳಿಗೆ ಹಾರ ಹಾಕಿ ಸನ್ಮಾನ ಮಾಡುವ ಮೂಲಕ ತೀವ್ರ ಟೀಕೆಗೆ ಗುರಿಯಾಗಿದ್ದ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಜಯಂತ್‌ ಸಿನ್ಹಾ ಅವರು ಬುಧವಾರ ವಿಷಾದ ವ್ಯಕ್ತಪಡಿಸಿದ್ದಾರೆ.
ಪ್ರಕರಣ ನ್ಯಾಯಾಲಯದಲ್ಲಿದ್ದು, ಆ ಬಗ್ಗೆ ನಾವು ಮಾತನಾಡುವುದು ಸರಿಯಲ್ಲ ಎಂದು ನಾನು ಹಲವು ಬಾರಿ ಹೇಳಿದ್ದೇನೆ. ಕಾನೂನು ಕ್ರಮ ತೆಗೆದುಕೊಳ್ಳಲದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಅಮಾಯಕರಿಗೆ ಶಿಕ್ಷೆಯಾಗಬಾರದು ಎಂದು ನಾವು ಸದಾ ಕೆಲಸ ಮಾಡುತ್ತೇವೆ. ನಾನು ಆರೋಪಿಗಳಿಗೆ ಹಾರ ಹಾಕುವುದರಿಂದ ಹತ್ಯೆಗೆ ಬೆಂಬಲ ನೀಡಿದಂತಾಗುತ್ತದೆ ಎನ್ನುವದಾದರೆ, ಆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಚಿವರು ಹೇಳಿದ್ದಾರೆ.
ಅಲಿಮುದ್ದೀನ್ ಅನ್ಸಾರಿ ಎಂಬ ದನಗಳ ವ್ಯಾಪಾರಿಯ ಹತ್ಯೆ ಆರೋಪದಲ್ಲಿ ಶಿಕ್ಷೆಗೊಳಗಾಗಿರುವ ವ್ಯಕ್ತಿಗಳಿಗೆ ಜಯಂತ್‌ ಸಿನ್ಹಾ ಸನ್ಮಾನ ಮಾಡಿದ ಫೋಟೋ ಜುಲೈ 6ರಂದು ವೈರಲ್ ಆಗಿತ್ತು.
ಸಿನ್ಹಾ ಸನ್ಮಾನಕ್ಕೆ ಪ್ರತಿಪಕ್ಷಗಳಿಂದ ಮಾತ್ರವಲ್ಲದೆ ಸ್ವಪಕ್ಷ ಮತ್ತು ಅವರ ತಂದೆ ಯಶವಂತ್ ಸಿನ್ಹಾ ಅವರಿಂದಲೂ ತೀವ್ರ ವಿರೋಧ ವ್ಯಕ್ತವಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT