ಸಾಂದರ್ಭಿಕ ಚಿತ್ರ 
ದೇಶ

ಶುಲ್ಕ ಬಾಕಿ ಹಿನ್ನೆಲೆ: ನರ್ಸರಿ ಮಕ್ಕಳನ್ನು ಬೇಸ್ ಮೆಂಟ್ ನಲ್ಲಿ ಲಾಕ್ ಮಾಡಿದ ಶಾಲೆ!

ಶಾಲೆಯ ಶುಲ್ಕವನ್ನು ಪಾವತಿಸದೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಪ್ರತಿಷ್ಠಿತ ಶಾಲೆಯೊಂದರ ಬೇಸ್‌ಮೆಂಟ್‌ನಲ್ಲಿ ಕನಿಷ್ಠ 16 ನರ್ಸರಿ ಬಾಲಕಿಯರನ್ನು ...

ನವದೆಹಲಿ: ಶಾಲೆಯ ಶುಲ್ಕವನ್ನು ಪಾವತಿಸದೆ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಪ್ರತಿಷ್ಠಿತ ಶಾಲೆಯೊಂದರ ಬೇಸ್‌ಮೆಂಟ್‌ನಲ್ಲಿ ಕನಿಷ್ಠ 16 ನರ್ಸರಿ ಬಾಲಕಿಯರನ್ನು ಲಾಕ್‌ ಮಾಡಿಟ್ಟ ಆಘಾತಕಾರಿ ಘಟನೆ ವರದಿಯಾಗಿದೆ.
ಕಳೆದ ವಾರ ಮಧ್ಯಾಹ್ನ ಮಕ್ಕಳ ಪೋಷಕರು ತಮ್ಮ  ಮಕ್ಕಳನ್ನು ರಾಬಿಯಾ ಗರ್ಲ್ಸ್‌ ಪಬ್ಲಿಕ್‌ ಸ್ಕೂಲ್‌ ನಿಂದ ಮನೆಗೊಯ್ಯಲು ಶಾಲೆಗೆ ಬಂದಿದ್ದಾಗಲೇ "ಮಕ್ಕಳ ಒತ್ತೆ ಸೆರೆ' ಪ್ರಕರಣ ಬೆಳಕಿಗೆ ಬಂದಿದೆ,
ಬೆಳಗ್ಗೆ 7.30 ರಿಂದ ಮಧ್ಯಾಹ್ನ 12.30ರ ವರೆಗೂ ಮಕ್ಕಳನ್ನು ಹೆಚ್ಚಿನ ತಾಪಮಾನವಿರುವ ಬೇಸ್ ಮೆಂಟ್ ನಲ್ಲಿ ಕೂಡಿ ಹಾಕಲಾಗಿತ್ತು, ಮಕ್ಕಳು ಹಸಿವು ಬಾಯಾರಿಕೆ ಎಂದರೂ ಶಿಕ್ಷಕಿಯರು ಕೇರ್ ಮಾಡಿಲ್ಲ ಎಂದು ಆರೋಪಿಸಲಾಗಿದೆ.
ಶಾಲೆಯ ತರಗತಿ ಕೋಣೆಯಲ್ಲಿ ತಮ್ಮ ಮಕ್ಕಳು ಇಲ್ಲದಿರುವುದನ್ನು ಕಂಡ ಹೆತ್ತವರು ಶಾಲಾ ಸಿಬಂದಿಗಳನ್ನು ಪ್ರಶ್ನಿಸಿದಾಗ ಟ್ಯೂಶನ್‌ ಫೀ ಬಾಕಿ ಇಡಲಾಗಿರುವ ಕಾರಣ ಆಡಳಿತ ವರ್ಗದವರು ಶಾಲಾ ಕಟ್ಟಡದ ಬೇಸ್‌ಮೆಂಟ್‌ ನಲ್ಲಿ ಮಕ್ಕಳನ್ನು  (ತಳ ಅಂತಸ್ತಿನಲ್ಲಿ) ಲಾಕ್‌ ಮಾಡಿ ಇಟ್ಟಿದ್ದಾರೆ ಎಂದು ಉತ್ತರಿಸಿದರು. 
ನಾವು ಮಕ್ಕಳ ಫೀಸನ್ನು ಮುಂಗಡವಾಗಿ ಪಾವತಿಸಿದ್ದೇವೆ; ಆದರೂ ನಮ್ಮ ಮಕ್ಕಳನ್ನು ಒತ್ತೆ ಸೆರೆಯಲ್ಲಿ ಇರಿಸಿಕೊಂಡಿದ್ದಾರೆ ಎಂದು  ಕೆಲ ಪೋಷಕರು ದೂರಿದರು. 
ಇನ್ನೂ ರೆಬಿಯಾ ಗರ್ಲ್ಸ್ ಪಬ್ಲಿಕ್ ಸ್ಕೂಲ್ ನಲ್ಲಿ ಶುಲ್ಕ ಪಾವತಿಸದಿದ್ದಕ್ಕೆ 16 ವಿದ್ಯಾರ್ಥಿಗಳನ್ನು ಕೂಡಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೂಚಿಸಿದ್ದಾರೆ. ಶಾಲೆಯ ವಿರುದ್ಧ ಸ್ಥಳೀಯ ಪೊಲೀಸರು ಸೆಕ್ಷನ್ 75 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
ಶಾಲೆಯ ಬೇಸ್ ಮೆಂಟ್ ನಲ್ಲಿ ವಿದ್ಯಾರ್ಥಿನಿಯರನ್ನು ಕೂಡಿ ಹಾಕಿದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಲೆಯ ಮುಖ್ಯ ಶಿಕ್ಷಕಿ ಪರಾ ದಿಬಾ ಈ ಆರೋಪವನ್ನು ನಿರಾಕರಿಸಿದ್ದಾರೆ. ಮಕ್ಕಳು ಬೇಸ್ ಮೆಂಟ್ ನಲ್ಲಿದ್ದದ್ದಕ್ಕೆ ಇಬ್ಬರು ಶಿಕ್ಷಕರು ಹೊಣೆಯಾಗಿದ್ದಾರೆ. ಎಂದು ಹೇಳಿದ್ದಾರೆ.
ಮಕ್ಕಳು ಬೇಸ್ ಮೆಂಟ್ ನಲ್ಲಿ ಆಟವಾಡಲು ತೆರಳಿದ್ದರು, ಅಂದು ಪ್ಯಾನ್ ಕೆಟ್ಟು ಹೋಗಿತ್ತು, ಮಕ್ಕಳನ್ನು ನಾವು ಲಾಕ್ ಮಾಡಿದ್ದೆವು ಎಂಬುದು ಸುಳ್ಳು ಆರೋಪ ಎಂದು ಸ್ಪಷ್ಟ ಮುಖ್ಯ ಶಿಕ್ಷಕಿ ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT