ಹಮಿದ್ ಅನ್ಸಾರಿ 
ದೇಶ

ಕೆಲ ಯೋಜನೆಗಳು ಮುಸ್ಲಿಮರಿಗೆ ತಲುಪುತ್ತಿಲ್ಲ: ಹಮಿದ್ ಅನ್ಸಾರಿ

ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಕೆಲವು ಸರ್ಕಾರಿ ಯೋಜನೆಗಳು ಮುಸ್ಲಿಮರಿಗೆ ತಲುಪುತ್ತಿಲ್ಲ ಎಂದು ಮಾಜಿ...

ನವದೆಹಲಿ: ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಕೆಲವು ಸರ್ಕಾರಿ ಯೋಜನೆಗಳು ಮುಸ್ಲಿಮರಿಗೆ ತಲುಪುತ್ತಿಲ್ಲ ಎಂದು ಮಾಜಿ ಉಪ ರಾಷ್ಟ್ರಪತಿ ಹಮಿದ್ ಅನ್ಸಾರಿ ಅವರು ಗುರುವಾರ ಹೇಳಿದ್ದಾರೆ.
ಶಿಕ್ಷಣ ಅಥವಾ ಇತರೆ ಸಾಮಾಜಿಕ ಕಳಕಳಿಯ ವಿಚಾರದಲ್ಲಿ ಅಗತ್ಯವಿರುವವರಿಗೆ ಸರ್ಕಾರಿ ಯೋಜನೆಗಳ ಮೂಲಕ ಸಹಾಯ ಮಾಡಬೇಕು. ಆದರೆ ಕೆಲ ಸರ್ಕಾರಿ ವರದಿಗಳ ಪ್ರಕಾರ, ಕೆಲ ಯೋಜನೆಗಳು ಮುಸ್ಲಿಮರಿಗೆ ತಲುಪುತ್ತಿಲ್ಲ ಎಂದು ಎಎನ್ಐಗೆ ನೀಡಿದ ಸಂದರ್ಶನದಲ್ಲಿ ಮಾಜಿ ಉಪ ರಾಷ್ಟ್ರಪತಿ ಹೇಳಿದ್ದಾರೆ.
ದೇಶದಲ್ಲಿ ಶೇ.14.5ರಷ್ಟು ಮುಸ್ಲಿಮರಿದ್ದಾರೆ. ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಸೇರಿದಂತೆ ಕೆಲ ಪ್ರದೇಶಗಳಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗಿದೆ. ಮೂಲ ವಿಚಾರ ಏನಂದರೆ ಅವರೆಲ್ಲರೂ ಭಾರತೀಯ ನಾಗರಿಕರೇ. ಹೀಗಾಗಿ ಅವರಿಗೂ ಇತರೆ ನಾಗರಿಕರಿಗೆ ನೀಡಿದ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಬೇಕು. ಅವರು ವಿಭಿನ್ನ ಎಂದು ಯಾರೊ ಹೇಳಬಾರದು ಎಂದಿದ್ದಾರೆ.
ಇದೇ ವೇಳೆ ಸಾರ್ವಜನಿಕರಿಂದ ಆಗುತ್ತಿರುವ ಹಲ್ಲೆ ಮತ್ತು ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಅನ್ಸಾರಿ, ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಸಾರ್ವಜನಿಕರ ಪ್ರತಿಕ್ರಿಯೆಯೇ ಎಲ್ಲವನ್ನೂ ಹೇಳುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT