ಸಂಗ್ರಹ ಚಿತ್ರ 
ದೇಶ

ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣ: ಉಲ್ಲಾ ಹೊಡೆದ ಮತ್ತಿಬ್ಬರು ಸಾಕ್ಷಿಗಳು!

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೆಸರು ತಳುಕು ಹಾಕಿಕೊಂಡಿರುವ ಗುಜರಾತ್ ನ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್ ಕೌಂಟರ್ ಪ್ರಕರಣ ಮತ್ತೆ ಕಗ್ಗಂಟಾಗಿದ್ದು, ಪ್ರಕರಣ ಇಬ್ಬರು ಸಾಕ್ಷಿಗಳು ಇದೀಗ ಉಲ್ಟಾ ಹೊಡೆದಿದ್ದಾರೆ.

ಅಹ್ಮದಾಬಾದ್: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೆಸರು ತಳುಕು ಹಾಕಿಕೊಂಡಿರುವ ಗುಜರಾತ್ ನ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್ ಕೌಂಟರ್ ಪ್ರಕರಣ ಮತ್ತೆ ಕಗ್ಗಂಟಾಗಿದ್ದು, ಪ್ರಕರಣ ಇಬ್ಬರು ಸಾಕ್ಷಿಗಳು ಇದೀಗ ಉಲ್ಟಾ ಹೊಡೆದಿದ್ದಾರೆ.
ಪ್ರಕರಣ ಸಂಬಂಧ ಇಂದು ನಡೆದ ವಿಚಾರಣೆಯಲ್ಲಿ ಪಾಲ್ಗೊಂಡಿದ್ದ ಸಾಕ್ಷಿಗಳಾದ ವಕೀಲ ಕೃಷ್ಣ ತ್ರಿಪಾಠಿ ಮತ್ತು ಮಹಿಪಾಲ್ ಸಿಂಗ್ ತಮ್ಮ ಈ ಹಿಂದಿನ ಹೇಳಿಕೆಗಳಿಗೆ ಭಿನ್ನ ಎಂಬಂತಹ ಹೇಳಿಕೆಗಳನ್ನು ನೀಡಿದ್ದಾರೆ. ಪ್ರಕರಣ ಸಂಬಂಧ ಈ ವರೆಗೂ 100ಕ್ಕೂ ಅಧಿಕ ಸಾಕ್ಷಿಗಳನ್ನು ವಿಚಾರಣೆ ನಡೆಸಿದ್ದು,  ಈ ಪೈಕಿ 85 ಸಾಕ್ಷಿಗಳು ಭಿನ್ನ ಹೇಳಿಕೆ ನೀಡಿ ಪ್ರಕರಣ ಮತ್ತೆ ಕಗ್ಗಂಟಾಗುವಂತೆ ಮಾಡಿದ್ದಾರೆ.
ಇಂದು ವಿಚಾರಣೆಗೆ ಹಾಜರಾಗಿದ್ದ ಪ್ರಜಾಪತಿ ಪರ ವಕೀಲ ಕೃಷ್ಣ ತ್ರಿಪಾಠಿ ಮತ್ತು ಮಹಿಪಾಲ್ ಸಿಂಗ್ ಇಂದು ಕೋರ್ಟ್ ನಲ್ಲಿ ತಮ್ಮ ಹೇಳಿಕೆ ದಾಖಲಿಸಿದರು. ಸಿಬಿಐ ವಿಶೇಷ ನ್ಯಾಯಮೂರ್ತಿ ಎಸ್ ಜೆ ಶರ್ಮಾ ಅವರ ಮುಂದೆ ಹಾಜರು ಪಡಿಸಿದಾಗ ಉಜ್ಜೈನ್ ನಲ್ಲಿ ಪ್ರಜಾಪತಿ ವಿರುದ್ಧ ದಾಖಲಾಗಿದ್ದ ಕಳ್ಳತನ ಪ್ರಕರಣ ಸಂಬಂಧ ತಾವು ಪ್ರಜಾಪತಿ ಅವರ ಪರ ವಕೀಲೆಯಾಗಿದ್ದೆ ಎಂದು ಕೃಷ್ಣ ತ್ರಿಪಾಠಿ ಹೇಳಿದ್ದಾರೆ. ಈ ಹಿಂದೆ ನಾನು ಪ್ರಜಾಪತಿ ಅವರನ್ನು ಕೋರ್ಟ್ ಆವರಣದಲ್ಲಿ ಭೇಟಿ ಮಾಡಿದ್ದೆ. ಆಗ ವಿಚಾರಣೆಗೆ ಗೈರಾದ ಕುರಿತು ವಿಚಾರಿಸಿದಾಗ ಅವರು ಪೊಲೀಸರು ನನ್ನನ್ನು ನಕಲಿ ಎನ್ ಕೌಂಟರ್ ನಲ್ಲಿ ಕೊಲ್ಲುವ ಸಂಚು ರೂಪಿಸಿದ್ದರು. ಹೀಗಾಗಿ ಅವರಿಂದ ನಾನು ತಪ್ಪಿಸಿಕೊಂಡಿದ್ದೆ ಎಂದು ಹೇಳಿದ್ದರು ಎಂದು ತ್ರಿಪಾಠಿ ತಮ್ಮ ಹೇಳಿಕೆಯಲ್ಲಿ ನಮೂದಿಸಿದ್ದಾರೆ.
ಪ್ರಕರಣದ ಮತ್ತೋರ್ವ ಸಾಕ್ಷಿ ಮಹಿಪಾಲ್ ಸಿಂಗ್ ಕೂಡ ತನ್ನ ಈ ಹಿಂದಿನ ಹೇಳಿಕೆಗೆ ವ್ಯತಿರಿಕ್ತ ಹೇಳಿಕೆ ನೀಡಿದ್ದಾನೆ ಎಂದು ಸಿಬಿಐ ಪರ ವಕೀಲರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT