ಸುಪ್ರೀಂ ಕೋರ್ಟ್ 
ದೇಶ

'ನಾನೇ ಸೂಪರ್ ಮ್ಯಾನ್ ಅಂತೀರಾ, ಕೆಲ್ಸಾನೇ ಮಾಡಲ್ಲ': ದೆಹಲಿ ಲೆ. ಗವರ್ನರ್ ಗೆ ಸುಪ್ರೀಂ ತರಾಟೆ

'ನಾನೇ ಸೂಪರ್ ಮ್ಯಾನ್ ಎಂದು ಹೇಳುತ್ತೀರಿ. ಆದರೆ ಯಾವುದೇ ಕೆಲಸ ಮಾಡುವುದಿಲ್ಲ' ಎಂದು ದೆಹಲಿ ಲೆಫ್ಟಿನೆಂಟ್...

ನವದೆಹಲಿ: 'ನಾನೇ ಸೂಪರ್ ಮ್ಯಾನ್ ಎಂದು ಹೇಳುತ್ತೀರಿ. ಆದರೆ ಯಾವುದೇ ಕೆಲಸ ಮಾಡುವುದಿಲ್ಲ' ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರನ್ನು ಗುರುವಾರ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಗಾರ್ಬೇಜ್ ಸಮಸ್ಯೆ ನಿರ್ವಹಿಸುವಲ್ಲಿ ಮತ್ತು ಅದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಲ್ಲಿ ನಾನು ವಿಫಲವಾಗಿದ್ದೇನೆ ಎಂದು ಅನಿಲ್ ಬೈಜಾಲ್ ಕೋರ್ಟ್ ಗೆ ತಿಳಿಸಿದರು. ಇದರಿಂದ ಆಕ್ರೋಶಗೊಂಡ ಸುಪ್ರೀಂ ಕೋರ್ಟ್, 'ನನಗೆ ಅಧಿಕಾರ ಇದೆ. ನಾನೇ ಸೂಪರ್ ಮ್ಯಾನ್ ಎಂದು ನೀವು ಹೇಳುತ್ತೀರಿ. ಆದರೆ ನೀವು ಏನೂ ಕೆಲಸ ಮಾಡುವುದಿಲ್ಲ' ಎಂದು ಚಾಟಿ ಬೀಸಿದೆ.
ಮಹಾನಗರ ಪಾಲಿಕೆಗಳ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಅಧಿಕಾರ ಇದೆ. ಆದರೆ ಗಾರ್ಬೇಜ್ ಸಮಸ್ಯೆ ಪರಿಹರಿಸಲು ಅವರು ಯಾವುದೇ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟ್ ದೇಶದಾದ್ಯಂತ ಘನ ತ್ಯಾಜ್ಯ ನಿರ್ವಹಣಾ ಸಮಸ್ಯೆ ಕುರಿತು ವಿಚಾರಣೆ ನಡೆಸುತ್ತಿದ್ದು, ಈ ವೇಳೆ ದೆಹಲಿ ಗಾರ್ಬೇಜ್ ಸಮಸ್ಯೆಗೆ ಯಾರನ್ನು ದೂರಬೇಕು. ಕೇಂದ್ರ ಸರ್ಕಾರವನ್ನಾ ಅಥವಾ ದೆಹಲಿ ಸರ್ಕಾರವನ್ನಾ ಎಂದು ಪ್ರಶ್ನಿಸಿತು.
ಇದೇ ವೇಳೆ, ರಾಷ್ಟ್ರರಾಜಧಾನಿ ಸಮಸ್ಯೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೂರುವಂತಿಲ್ಲ ಎಂದ ಕೋರ್ಟ್, ಲೆಫ್ಟಿನೆಂಟ್ ಗವರ್ನರ್ ತಮಗೆ ಅಧಿಕಾರ ಇದೆ ಎಂದು ಹೇಳಿದ್ದು, ಇದರಲ್ಲಿ ದೆಹಲಿ ಸಿಎಂ ಅನ್ನು ಎಳೆದು ತರಬೇಡಿ ಎಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT