ಸುಪ್ರೀಂ ಕೋರ್ಟ್ 
ದೇಶ

ಸಾಮಾಜಿಕ ಮಾಧ್ಯಮ ಉಸ್ತುವಾರಿ ಕೇಂದ್ರ ಸ್ಥಾಪನೆಗೆ 'ಸುಪ್ರೀಂ' ಆಕ್ಷೇಪ

ಆನ್ ಲೈನ್ ಅಂಕಿಅಂಶಗಳ ಮೇಲುಸ್ತುವಾರಿಗೆ ಸಾಮಾಜಿಕ ಮಾಧ್ಯಮ ಕೇಂದ್ರವನ್ನು ಸ್ಥಾಪಿಸುವ ಕೇಂದ್ರ ...

ನವದೆಹಲಿ: ಆನ್ ಲೈನ್ ಅಂಕಿಅಂಶಗಳ ಮೇಲುಸ್ತುವಾರಿಗೆ ಸಾಮಾಜಿಕ ಮಾಧ್ಯಮ ಕೇಂದ್ರವನ್ನು ಸ್ಥಾಪಿಸುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಸದಾ ಕಣ್ಗಾವಲಿನ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಎ ಎಂ ಖನ್ವಿಲ್ಕರ್ ಮತ್ತು ಡಿ ವೈ ಚಂದ್ರಾಚೂಡ್ ಅವರನ್ನೊಳಗೊಂಡ ನ್ಯಾಯಪೀಠ, ಕೇಂದ್ರ ಸರ್ಕಾರಕ್ಕೆ ಈ ಸಂಬಂಧ ನೊಟೀಸ್ ಕಳುಹಿಸಿ ಎರಡು ವಾರಗಳೊಳಗೆ ಉತ್ತರಿಸುವಂತೆ ಹೇಳಿದೆ. ಅಟೊರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಈ ವಿಷಯದಲ್ಲಿ ಸಹಕರಿಸುವಂತೆ ಕೋರ್ಟ್ ಹೇಳಿದೆ. ತೃಣಮೂಲ ಕಾಂಗ್ರೆಸ್ ಶಾಸಕ ಮಹುವಾ ಮೊಯ್ಟ್ರಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯದ ವಿಭಾಗೀಯ ಪೀಠ ಹೀಗೆ ಹೇಳಿದೆ.

ಕೇಂದ್ರ ಸರ್ಕಾರ ಜನರ ವಾಟ್ಸಾಪ್ ಮೆಸೇಜ್ ಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಸಾಮಾಜಿಕ ಜಾಲತಾಣ ಕೇಂದ್ರವನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ಕ್ರಮ ಸದಾ ಕಣ್ಗಾವಲಿನ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದಂತಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮೊಯ್ಟ್ರಾ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಎ ಎಂ ಸಿಂಘ್ವಿ, ಸರ್ಕಾರ ಪ್ರಸ್ತಾವನೆಗೆ ಮನವಿ ಮಾಡಿದ್ದು ಆಗಸ್ಟ್ 20ಕ್ಕೆ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ.

ಸಾಮಾಜಿಕ ಮಾಧ್ಯಮ ಕೇಂದ್ರದ ಸಹಾಯದಿಂದ ಅದರಲ್ಲಿನ ವಿಷಯಗಳನ್ನು ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರ ಬಯಸುತ್ತದೆ ಎಂದು ವಾದ ಮಂಡಿಸಿದರು. ಮುಂದಿನ ವಿಚಾರಣೆಯನ್ನು ಆಗಸ್ಟ್ 3ಕ್ಕೆ ಮುಂದೂಡಿ ಈ ವಾದದಲ್ಲಿ ಸರ್ಕಾರಿ ಪರ ವಕೀಲರು ಸರ್ಕಾರಕ್ಕೆ ಸಹಾಯ ಮಾಡಬಹುದು ಎಂದು ಹೇಳಿದೆ.

ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳ ವಿಷಯಗಳನ್ನು ಸಂಗ್ರಹಿಸಿ ವಿಶ್ಲೇಷಿಸುವ ಸೋಷಿಯಲ್ ಮೀಡಿಯಾ ಕಮ್ಯೂನಿಕೇಷನ್ ಹಬ್ ನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ನಿರ್ಣಯಕ್ಕೆ ತಡೆ ತರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಜೂನ್ 18ರಂದು ನಿರಾಕರಿಸಿತ್ತು.

ದೇಶದ ಜನರ ಟ್ವಿಟ್ಟರ್, ಇನ್ಸ್ಟಾಗ್ರಾಮ್, ಫೇಸ್ ಬುಕ್ ಮತ್ತು ಇತರ ಇಮೇಲ್ ಗಳ ಖಾತೆಗಳನ್ನು ಪತ್ತೆಹಚ್ಚಿ ಅವುಗಳಲ್ಲಿನ ವಿಷಯಗಳನ್ನು ಉಸ್ತುವಾರಿ ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT