ಪಿಡಿಪಿಯನ್ನು ಒಡೆದರೆ ಗಂಭೀರ ಪರಿಣಾಮ, ಬಿಜೆಪಿಗೆ ಮೆಹಬೂಬಾ ಮುಫ್ತಿ ಎಚ್ಚರಿಕೆ 
ದೇಶ

ಪಿಡಿಪಿ ಪಕ್ಷವನ್ನು ಒಡೆಯಲು ಯತ್ನಿಸಿದರೆ ಗಂಭೀರ ಪರಿಣಾಮ: ಬಿಜೆಪಿಗೆ ಮೆಹಬೂಬಾ ಮುಫ್ತಿ ಎಚ್ಚರಿಕೆ

ಪಿಡಿಪಿಯನ್ನು ಒಡೆಯಲು ಯತ್ನಿಸಿದರೆ ಬಿಜೆಪಿ ಗಂಭೀರ ಪರಿಣಾಮ ಎದುರಿಸಲು ತಯಾರಾಗಬೇಕಾಗುತ್ತದೆ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ....

ಶ್ರೀನಗರ: ಪಿಡಿಪಿಯನ್ನು ಒಡೆಯಲು ಯತ್ನಿಸಿದರೆ ಬಿಜೆಪಿ ಗಂಭೀರ ಪರಿಣಾಮ ಎದುರಿಸಲು ತಯಾರಾಗಬೇಕಾಗುತ್ತದೆ ಎಂದು  ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ  ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬ ಮುಫ್ತಿ ಎಚ್ಚರಿಸಿದ್ದಾರೆ.
1987ರಲ್ಲಿ ಏನಾಯಿತೆನ್ನುವುದನ್ನು ಬಿಜೆಪಿ ನೆನೆಸಿಕೊಳ್ಳಬೇಕು ಎಂದು ಹೇಳಿರುವ ಮುಫ್ತಿ ಕಾಶ್ಮೀರ ಬಿಜೆಪಿ ಮಾಡಿದ ಕೆಲಸದಿಂದ ಎಂತಹಾ ಪರಿಣಾಮ ಎದುರಿಸಬೇಕಾಯಿತು ಎನ್ನುವುದನ್ನು ಮರೆಯಬಾರದು ಎಂದಿದ್ದಾರೆ.
1987ರಂತೆಯೇ ಕೇಂದ್ರದ ಬಿಜೆಪಿಯು ರಾಜ್ಯದ ಜನತೆಯ ಮತದಾನದ  ಹಕ್ಕನ್ನು ಕಿತ್ತುಕೊಳ್ಳಬಯಸಿದರೆ, ಪಿಡಿಪಿಯನ್ನು ವಿಭಜಿಸಲು ಯತ್ನಿಸಿದರೆ ಕಾಶ್ಮೀರದಲ್ಲಿ ಇನ್ನಷ್ಟು ಸಂಖ್ಯೆಯ ಸಲಾಹದ್ದೀನ್ ಮತ್ತು ಯಾಸಿನ್ ಮಲಿಕ್ ಜನಿಸುತ್ತಾರೆ.ಇದು ಅಪಾಯಕಾರಿ ಬೆಳವಣಿಗೆಗೆ ಕಾರಣವಾಗಲಿದ ಎಂದು ಪಿಡಿಪಿ ಮುಖ್ಯಸ್ಥರು ಹೇಳಿದ್ದಾರೆ.
ಹುತಾತ್ಮರ ದಿನಾಚರಣೆಯ ಸ್ಮರಣಾರ್ಥವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.
ಒಮರ್ ಅಬ್ದುಲ್ಲಾ ತಿರುಗೇಟು
ಪಕ್ಷ ಒಡೆದರೆ ಪ್ರತ್ಯೇಕತಾವಾದಿಗಳು ಹುಟ್ಟುತ್ತಾರೆ ಎನ್ನುವ ಪಿಡಿಪಿ ನಾಯಕಿ ಮುಫ್ತಿ ಹೇಳಿಕೆಗೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿರುಗೇಟು ನೀಡಿದ್ದಾರೆ. ಪಕ್ಷ ವಿಭಾಗವಾದರೆ ಯಾವ ಪ್ರತ್ಯೇಕತಾವಾದಿಗಳು ಜನಿಸಲಾರರು ಎಂದು ಅವರು ಹೇಳಿದ್ದಾರೆ.
ಪಿಡಿಪಿ ವಿಭಜನೆಯಾದರೆ ಯಾವ ಪ್ರತ್ಯೇಕತಾವಾದಿಗಳು ಹುತ್ಟುವುದಿಲ್ಲ, ಬದಲಾಗಿ ದೆಹಲಿಯು ಪಿಡಿ[ಇ ಒಡೆಯುವ ಮೂಲಕ ಕಾಶ್ಮೀರಿಗಳ ಮತವನ್ನು ವಿಭಜಿಸಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT