ನನ್ನನ್ನು ಕ್ಷಮಿಸಿ: ಕ್ಷಮಾಪಣೆ ಪತ್ರದೊಡನೆ ಕದ್ದ ಆಭರಣ ಮರಳಿಸಿದ ಕೇರಳದ ಕಳ್ಳ 
ದೇಶ

ನನ್ನನ್ನು ಕ್ಷಮಿಸಿ; ಕ್ಷಮಾಪಣೆ ಪತ್ರದೊಡನೆ ಕದ್ದ ಆಭರಣ ಮರಳಿಸಿದ ಕೇರಳದ ಕಳ್ಳ

ನಾನು ಮತ್ತೆ ಅಂತಹ ಕೃತ್ಯ ಎಸಗುವುದಿಲ್ಲ.ದಯವಿಟ್ಟು ನನ್ನ ವಿರುದ್ಧ ಪೊಲೀಸರಿಗೆ ದೂರಬೇಡಿ - ಹೀಗೆಂದು ಪತ್ರ ಬರೆದಿಟ್ಟು ಕಳ್ಳನೊಬ್ಬ ತಾನು ಕದ್ದಿದ್ದ ಆಭರಣವನ್ನು ಹಿಂತಿರುಗಿಸಿದ....

ಅಲಪ್ಪುಳ (ಕೇರಳ): ನಾನು ಮತ್ತೆ ಅಂತಹ ಕೃತ್ಯ ಎಸಗುವುದಿಲ್ಲ.ದಯವಿಟ್ಟು ನನ್ನ ವಿರುದ್ಧ ಪೊಲೀಸರಿಗೆ ದೂರಬೇಡಿ - ಹೀಗೆಂದು ಪತ್ರ ಬರೆದಿಟ್ಟು ಕಳ್ಳನೊಬ್ಬ ತಾನು ಕದ್ದಿದ್ದ ಆಭರಣವನ್ನು ಹಿಂತಿರುಗಿಸಿದ ಅಪರೂಪದ ಘಟನೆ ಕೇರಳದಲ್ಲಿ ನಡೆದಿದೆ.
ಕೇರ;ಳದ ಅಲಪ್ಪುಳದಲ್ಲಿ ನಡೆದ ಘಟನೆಯಲ್ಲಿ. ಕುರುಮಾಡಿ ನಿವಾಸಿ ಮಧುಕುಮಾರ್ ಮನೆಯಿಂದ ಕಳುವಾಗಿದ್ದ ಚಿನ್ನವನ್ನು ಕಳ್ಳ ಹಿಂತಿರುಗಿಸಿದ್ದಾನೆ.
ಮಂಗಳವಾರ ಅಣ್ಣನ ಮಗನ ಮದುವೆ ಕಾರ್ಯಕ್ಕೆಂದು ತೆರಳಿದ್ದ ಮಧುಕುಮಾರ್ ತಮ್ಮ ಮನೆ ಮುಂದಿನ ಗೇಟ್ ಗೆ ಬೀಗ ಹಾಕುವುದು ಮರೆತಿದ್ದಾರೆ. ರಾತ್ರಿ 10.30ರ ವೇಳೆಗೆ ಮನೆಗೆ ಹಿಂತಿರುಗುವಾಗ ಅವರಿಗೆ ಆಘಾತ ಕಾದಿತ್ತು. ಮನೆ ಬಾಗಿಲು ಮುರಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ಅಲ್ಲದೆ ಮನೆಯ ಹಿಂಭಾಗದ ಬಾಗಿಲನ್ನೂ ಸಹ ತೆರೆದದ್ದು ಇನ್ನಷ್ಟು ಗುಮಾನಿಗೆ ಕಾರನವಾಗಿತ್ತು.
ತಕ್ಷಣವೇ ಪೋಲೀಸರಿಗೆ ಈ ಕುರಿತು ಮಾಹಿತಿ ತಿಳಿಸಿದ ಕುಮಾರ್ ಕಲವು ಮಾಡಿದ ಶಂಕಿತ ವ್ಯಕ್ತಿಯ ಹೆಸರನ್ನೂ ಸಹ ಪೋಳೀಸರಿಗೆ ಹೇಳಿದ್ದಾರೆ,.
ಆದರೆ ಗುರುವಾರ ಬೆಳಿಗ್ಗೆ ಘಟನೆಗೆ ವಿಚಿತ್ರ ತಿರುವು ದೊರಕಿತ್ತು. ಮನೆಯ ಮುಂಭಾಗದ ಗೇಟ್ಮುಂದೆ ಕಳುವಾದ ಆಭರಣದ ಕಟ್ಟುಮತ್ತು ಪತ್ರವೊಂದು ಕ್ಂಡಿತ್ತು. ಪತ್ರ ಒಡೆದು ನೊಡಲಾಗಿ "ನನ್ನನ್ನು ಕ್ಷಮಿಸಿ, ಹಣಕಾಸಿನ ಅವಶ್ಯಕತೆ ಇದ್ದ ಕಾರಣ ಒತ್ತಡಕ್ಕೊಳಗಾದ ನಾನು ನಿಮ್ಮ ಮನೆಯ ಚಿನ್ನವನ್ನು ಕಳವು ಮಾಡಿದೆ. ಆದರೆ ಇನ್ನೊಂದೂ ಹೀಗೆ ಮಾಡಲಾರೆ, ನನ್ನನ್ನು ಪೋಲೀಸರಿಗೆ ಹಿಡಿದು ಕೊಡಬೇಡಿ" ಎಂದು ಬರೆದಿದ್ದದ್ದು ಕ್ಂಡಿದೆ.
ಪತ್ರ ಹಾಗೂ ಚಿನ್ನ ಸಿಕ್ಕ ಹಿನ್ನೆಲೆಯಲ್ಲಿ ಕುಮಾರ್ ತಾವು ನೀಡಿದ ದೂರನ್ನು ಹಿಂಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT