ಸಂಗ್ರಹ ಚಿತ್ರ 
ದೇಶ

'ಹಿಂದೂ ತಾಲಿಬಾನಿ'ಗರಿಂದ ಬಾಬ್ರಿ ಮಸೀದಿ ಧ್ವಂಸ: ಸುಪ್ರೀಂ ಕೋರ್ಟ್

ಹಿಂದೂ ತಾಲಿಬಾನಿಗಳು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದರು ಎಂದು ಸುಪ್ರೀಂ ಕೋರ್ಟ್ ತನ್ನ ಅಸಮಾಧಾನ ವ್ಯಕ್ತಪಡಿಸಿದೆ.

ನವದೆಹಲಿ: ಹಿಂದೂ ತಾಲಿಬಾನಿಗಳು ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಿದರು ಎಂದು ಸುಪ್ರೀಂ ಕೋರ್ಟ್ ತನ್ನ ಅಸಮಾಧಾನ ವ್ಯಕ್ತಪಡಿಸಿದೆ.
ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ವಿಚಾರಣೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಅಶೋಖ್ ಭೂಷಣ್ ಮತ್ತು ಎಸ್ ಅಬ್ದುಲ್ ನಜೀರ್ ನೇತೃತ್ವದ ತ್ರಿಸದಸ್ಯ ಪೀಠ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಸಂಘಪರಿವಾರದ ಸದಸ್ಯರ ವಿರುದ್ಧ ಕಿಡಿಕಾರಿತು. 
ಆಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಬುದ್ಧನ ವಿಗ್ರಹವನ್ನು ಧ್ವಂಸಗೊಳಿಸಿದಂತೆಯೇ ಇಲ್ಲಿ ಬಾಬ್ರಿ ಮಸೀದಿಯನ್ನು ಹಿಂದೂ ತಾಲಿಬಾನಿಗಳು ಧ್ವಂಸಗೊಳಿಸಿದರು. ಯಾವುದೇ ಧರ್ಮ, ಸಂವಿಧಾನ ಮತ್ತುಸಂಸ್ಕೃತಿ ಮಸೀದಿ, ದೇಗುಲಗಳಂತಹ ಧಾರ್ಮಿಕ ಕಟ್ಟಡಗಳನ್ನು ಧ್ವಂಸಗೊಳಿಸುವಂತೆ ಹೇಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಶಿಯಾ ವಕ್ಫ್ ಸಮಿತಿ ವಿವಾದ ಸ್ಥಳದ ಮೂರನೇ ಒಂದು ಭಾಗವನ್ನು ನೀಡಲು ಸಿದ್ಧವಿರುವ ಕುರಿತು ಹೇಳಿಕೆ ನೀಡಿದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಇಂತಹ ಹೇಳಿಕೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ಯುದ್ಧದ ಎಫೆಕ್ಟ್: ಅಮೆರಿಕದ ಶಸ್ತ್ರಾಸ್ತ್ರ ದಾಸ್ತಾನು ಖಾಲಿ? ರಕ್ಷಣಾ ಕಂಪನಿಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ಹೆಚ್ಚಿಸಲು ಪೆಂಟಗನ್ ಸೂಚನೆ

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!