ನಕ್ಸಲರ ವಿರುದ್ಧ ಕಾರ್ಯಾಚರಣೆ 
ದೇಶ

ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರ ಅಟ್ಟಹಾಸ, ಇಬ್ಬರು ಬಿಎಸ್ ಯೋಧರು ಹುತಾತ್ಮ

ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರು ತಮ್ಮ ಅಟ್ಟಹಾಸ ಮೆರೆದಿದ್ದು, ಎನ್ ಕೌಂಟರ್ ನಲ್ಲಿ ಇಬ್ಬರು ಬಿಎಸ್ ಎಫ್ ಯೋಧರು ಹುತಾತ್ಮರಾಗಿದ್ದಾರೆ.

ರಾಯ್ ಪುರ: ಛತ್ತೀಸ್ ಘಡದಲ್ಲಿ ಮತ್ತೆ ನಕ್ಸಲರು ತಮ್ಮ ಅಟ್ಟಹಾಸ ಮೆರೆದಿದ್ದು, ಎನ್ ಕೌಂಟರ್ ನಲ್ಲಿ ಇಬ್ಬರು ಬಿಎಸ್ ಎಫ್ ಯೋಧರು ಹುತಾತ್ಮರಾಗಿದ್ದಾರೆ.
ಛತ್ತೀಸ್ ಘಡದ ಕಂಕರ್ ಜಿಲ್ಲೆಯಲ್ಲಿ ನಕ್ಸಲರ ವಿರುದ್ಧ ಬಿಎಸ್ ಎಫ್ ಸಿಬ್ಬಂದಿ ಎನ್ ಕೌಂಟರ್ ನಡೆಸುತ್ತಿದ್ದು, ಬಿಎಸ್ ಎಫ್ ನ ಮಹ್ಲಾ ಕ್ಯಾಂಪ್ ಇರುವ ಅರಣ್ಯ ಪ್ರದೇಶದಲ್ಲಿ ಈ ಎನ್ ಕೌಂಟರ್ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಇನ್ನು ಎನ್ ಕೌಂಟರ್ ನಲ್ಲಿ ಇಬ್ಬುರ ಸೇನಾ ಸಿಬ್ಬಂದಿಗಳು ಹತರಾಗಿದ್ದು, ಮತ್ತೋರ್ವ ಸಿಬ್ಬಂದಿ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಸ್ತುತ ಎನ್ ಕೌಂಟರ್ ನಡೆಯುತ್ತಿರುವ ಪ್ರದೇಶ ಪಾರ್ತಪುರ್ ಪೊಲೀಸ್ ಸರಹದ್ದಿನದ್ದಾಗಿದ್ದು. ಇದೀಗ ಘಟನಾ ಪ್ರದೇಶಕ್ಕೆ ಸ್ಥಳೀಯ ಪೊಲೀಸರು ಕೂಡ ದೌಡಾಯಿಸಿದ್ದಾರೆ. ಬಿಎಸ್ ಎಫ್ ನ 114ನೇ ಬೆಟಾಲಿಯನ್ ತಂಡ ನಕ್ಸಲರ ವಿರುದ್ಧ ಶೋಧ ಕಾರ್ಯಾರಣೆ ಮುಗಿಸಿ ಕ್ಯಾಂಪ್ ಗೆ ವಾಪಸ್ ಆಗುತ್ತಿದ್ದ ವೇಳೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಂದು ಮೂಲಗಳ ಪ್ರಕಾರ ನಕ್ಸಲರು ಬಿಎಸ್ ಎಫ್ ಕ್ಯಾಂಪ್ ಮೇಲೆಯೇ ನೇರವಾಗಿ ಭಾರಿ ವಿಧ್ವಂಸಕ ದಾಳಿ ನಡೆಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಪ್ರಸ್ತುತ ಘಟನಾ ಪ್ರದೇಶದ ಸುತ್ತ ಮುತ್ತ ಹೈ ಅಲರ್ಟ್ ಘೋಷಣೆಯಾಗಿದ್ದು, ಎನ್ ಕೌಂಟರ್ ಪ್ರಗತಿಯಲ್ಲಿದೆ.
 ಹುತಾತ್ಮ ಯೋಧರಿಗೆ ಛತ್ತೀಸ್ ಘಡ ಮುಖ್ಯಮಂತ್ರಿ ರಮಣ್ ಸಿಂಗ್ ತೀವ್ರ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT