ಹಮೀದ್ ಅನ್ಸಾರಿ 
ದೇಶ

ಗೋ ರಕ್ಷಕರು ಪ್ರಧಾನಿ ಮೋದಿ ಮಾತು ಕೇಳದೇ ಇರುವುದು ಆತಂಕಕಾರಿ: ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ

ದೇಶಾದ್ಯಂತ ಗೋರಕ್ಷಣೆಗಾಗಿ ಕಾನೂನನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಈ ರೀತಿ ಮಾಡುವ ಗೋರಕ್ಷಕರು ಪ್ರಧಾನಿ ನರೇಂದ್ರ ಮೋದಿ ಅವರ ಮಾತಿಗೂ ಓಗೊಡದೇ ಇರುವುದು ಆತಂಕಕಾರಿ ಬೆಳವಣಿಗೆ

ನವದೆಹಲಿ: ದೇಶಾದ್ಯಂತ ಗೋರಕ್ಷಣೆಗಾಗಿ ಕಾನೂನನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಈ ರೀತಿ ಮಾಡುವ ಗೋರಕ್ಷಕರು ಪ್ರಧಾನಿ ನರೇಂದ್ರ ಮೋದಿ ಅವರ ಮಾತಿಗೂ ಓಗೊಡದೇ ಇರುವುದು ಆತಂಕಕಾರಿ ಬೆಳವಣಿಗೆ ಎಂದು ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಆತಂಕ ವ್ಯಕ್ತಪಡಿಸಿದ್ದಾರೆ. 
ಮೋದಿ ಬಲಿಷ್ಠ ನಾಯಕ, ಬಿಜೆಪಿಯಲ್ಲಿ ಅವರು ಪ್ರಶ್ನಾತೀತ ನಾಯಕ. ಆದರೆ ಪ್ರಧಾನಿಯ ಮಾತನ್ನು ಅವರ ಅನುಯಾಯಿಗಳೇ ಕೇಳದೇ ಇದ್ದಲ್ಲಿ ಅದು ಆತಂಕಕಾರಿ ಬೆಳವಣಿಗೆ. ಅವರ ವರ್ಚಸ್ಸನ್ನು ಅವರ ಅನುಯಾಯಿಗಳೇ ಕುಗ್ಗಿಸುತ್ತಿದ್ದಾರೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ ಹಾಗಂತ ಇದೇ ಅಂತಿಮ ಎಂದೂ ಹೇಳುತ್ತಿಲ್ಲ ಎಂದು ಅನ್ಸಾರಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
ಹಮೀದ್ ಅನ್ಸಾರಿ ಅವರ ಭಾಷಣಗಳ ಸಂಗ್ರಹವಾದ "ಡೇರ್ ಐ ಕ್ವೆಶ್ಚನ್" ಪುಸ್ತಕ ಬಿಡುಗಡೆಗೂ ಮುನ್ನ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು  "ಭಾರತದ ರಾಷ್ಟ್ರೀಯತೆ, ಬಹುತ್ವ, ಜಾತ್ಯಾತೀತತೆ ಸೇರಿದಂತೆ ಹಲವು ಅಂಶಗಳ ಬಗ್ಗೆ ಉಲ್ಲೇಖಿಸಿದ್ದೇನೆ" ಎಂದು ಹೇಳಿದ್ದಾರೆ.
ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಮುಸ್ಲಿಮರ ಅಭದ್ರತೆ ಕುರಿತು ಅನ್ಸಾರಿ ನೀಡಿದ್ದ ಹೇಳಿಕೆ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆಯೂ ಸ್ಪಷ್ಟನೆ ನೀಡಿರುವ ಅನ್ಸಾರಿ, ಸಮಾಜದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂಬುದು ಸತ್ಯ, ಆದರೆ ನರೇಂದ್ರ ಮೋದಿ ಪ್ರಧಾನಿಯಾದಾಗಿನಿಂದ ಮಾತ್ರ ಅಸಹಿಷ್ಣುತೆ ಹೆಚ್ಚುತ್ತಿದೆ ಎನ್ನುವುದಕ್ಕೆ ಸಾಧ್ಯವಿಲ್ಲ. ಈ ಹಿಂದಿನಿಂದಲೂ ಅಸಹಿಷ್ಣುತೆ ಇದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT