ಎನ್ ಡಿಎ ಸೇರಿ ಆಂಧ್ರ ಮುಖ್ಯಮಂತ್ರಿಯಾಗಿ: ಜಗನ್ ಮೋಹನ್ ರೆಡ್ಡಿಗೆ ಆಫರ್ 
ದೇಶ

ಎನ್ ಡಿಎ ಸೇರಿ ಆಂಧ್ರ ಮುಖ್ಯಮಂತ್ರಿಯಾಗಿ: ಜಗನ್ ಮೋಹನ್ ರೆಡ್ಡಿಗೆ ಆಫರ್

ಎನ್ ಡಿಎ ಸೇರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ರಾಮ್ ದಾಸ್ ಅಠಾವಳೆ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ನಾಯಕ ಜಗನ್ ಮೋಹನ್

ಹೈದರಾಬಾದ್: ಎನ್ ಡಿಎ ಸೇರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ರಾಮ್ ದಾಸ್ ಅಠಾವಳೆ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ನಾಯಕ ಜಗನ್ ಮೋಹನ್ ರೆಡ್ಡಿಗೆ ಆಫರ್ ನೀಡಿದ್ದಾರೆ. 
ವೈಎಸ್ ಆರ್ ಕಾಂಗ್ರೆಸ್ ಎನ್ ಡಿಎ ಸೇರಿದರೆ ಜಗನ್ ಮೋಹನ್ ರೆಡ್ಡಿ 2019 ರ ವಿಧಾನಸಭೆ ಚುನಾವಣೆ ನಂತರ ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಬಹುದು, ಅಷ್ಟೇ ಅಲ್ಲದೇ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆಯೂ ಎನ್ ಡಿ ಎ ಚಿಂತನೆ ನಡೆಸುತ್ತದೆ ಎಂದು ಅಠಾವಳೆ ಹೇಳಿದ್ದಾರೆ. 
ನನ್ನ ನೇತೃತ್ವದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಹಾಗೂ ವೈಎಸ್ ಆರ್ ಸಿಪಿ ಒಟ್ಟಿಗೆ ಚುನಾವಣೆ ಎದುರಿಸಿದರೆ ಬಿಜೆಪಿ ಹಾಗೂ ಆರ್ ಪಿಐ ಪಕ್ಷಗಳು ಸೇರಿ ಜಗನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತವೆ ಎಂದು ರಾಮ್ ದಾಸ್ ಅಠಾವಳೆ ಹೇಳಿದ್ದಾರೆ. 
ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದ್ದ ಚಂದ್ರಬಾಬು ನಾಯ್ಡು ವೈಎಸ್ ಆರ್ ಕಾಂಗ್ರೆಸ್ ಎನ್ ಡಿಎ ಮೈತ್ರಿಕೂಟ ಸೇರಲಿದ್ದಾರೆ ಎಂಬ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ರಾಮ್ ದಾಸ್ ಅಠಾವಳೆ ಹೇಳಿಕೆ ಮಹತ್ವ ಪಡೆದುಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT