ಸಂಗ್ರಹ ಚಿತ್ರ 
ದೇಶ

ಮಕ್ಕಳ ಮಾರಾಟ ಶಂಕೆ: ತೆರೇಸಾ ಚಾರಿಟೀಸ್ ಮೇಲೆ ಮೇಲೆ ಹದ್ದಿನಕಣ್ಣು

ಮಕ್ಕಳ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿರುವ ಕೇಂದ್ರ ಸರ್ಕಾರ ಮದರ್‌ ಥೆರೇಸಾಗೆ ಸಂಬಂಧಪಟ್ಟ ಮಿಶನರೀಸ್ ಆಫ್‌ ಚಾರಿಟಿ ಸೇರಿದಂತೆ, ಮಕ್ಕಳ ಆರೈಕೆ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿರುವ ಎಲ್ಲ ಸಂಸ್ಥೆಗಳೂ ನಿಗಾ ಇಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ಹೊರಡಿಸಿದೆ.

ನವದೆಹಲಿ: ಮಕ್ಕಳ ಕಳ್ಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿರುವ ಕೇಂದ್ರ ಸರ್ಕಾರ ಮದರ್‌ ಥೆರೇಸಾಗೆ ಸಂಬಂಧಪಟ್ಟ ಮಿಶನರೀಸ್ ಆಫ್‌ ಚಾರಿಟಿ ಸೇರಿದಂತೆ, ಮಕ್ಕಳ ಆರೈಕೆ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿರುವ ಎಲ್ಲ ಸಂಸ್ಥೆಗಳೂ ನಿಗಾ ಇಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ಹೊರಡಿಸಿದೆ.
ಈ ಬಗ್ಗೆ ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರು ಆದೇಶ ಹೊರಡಿಸಿದ್ದು, ತೆರೇಸಾ ಮಿಷನರಿಗಳೂ ಸೇರಿದಂತೆ ಮಕ್ಕಳ ಆರೈಕೆ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿರುವ ಎಲ್ಲ ಚಾರಿಟಿ ಮತ್ತು ಸಂಸ್ಥೆಗಳು ಕಡ್ಡಾಯವಾಗಿ ಪ್ರಾಧಿಕಾರದೊಂದಿಗೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಆದೇಶ ಹೊರಡಿಸಿದ್ದಾರೆ. 'ಮಕ್ಕಳ ಆರೈಕೆ ಸಂಸ್ಥೆಗಳನ್ನು ಸಾಕಷ್ಟು ಹಿಂದೆಯೇ ಲಿಂಕ್‌ ಮಾಡಬೇಕಿತ್ತು. ಈ ಸಂಸ್ಥೆಗಳಿಗೆ ಇದೇ ವಿಚಾರವಾಗಿ ಡಿಸೆಂಬರ್‌ 1, 2017ರ ಡೆಡ್‌ಲೈನ್‌ ವಿಧಿಸಲಾಗಿತ್ತು.ಆದರೆ ಈ ಪ್ರಕ್ರಿಯೆಯನ್ನು ತುರ್ತಾಗಿ ಮಾಡಬೇಕಾದ ಅಗತ್ಯವಿದೆ' ಎಂದು ಕೇಂದ್ರ ಸಚಿವೆ ಮನೇಕಾ ಗಾಂಧಿ  ಹೇಳಿದ್ದಾರೆ.
ಇನ್ನು ಇತ್ತೀಚೆಗಷ್ಟೇ ಜಾರ್ಖಂಡ್‌ ನ ರಾಂಚಿಯಲ್ಲಿ ಮಕ್ಕಳ ಕಳ್ಳಸಾಗಾಟದಲ್ಲಿ ಭಾಗಿಯಾಗಿದ್ದ ಮಿಷನರಿಯ ಇಬ್ಬರು ದಾದಿಯರನ್ನು ಪೊಲೀಸರು ಬಂಧಿಸಿದ್ದರು. ಮಕ್ಕಳ ಕಳ್ಳಸಾಗಾಟದ ದಂಧೆಯ ಭಾಗವಾಗಿದ್ದ ಇಬ್ಬರು ದಾದಿಯರು ಜಾರ್ಖಂಡ್‌ ಹಾಗು ಉತ್ತರ ಪ್ರದೇಶದಲ್ಲಿ ನಾಲ್ಕು ಹಸುಗೂಸುಗಳನ್ನು ಮಾರಾಟ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದರು.
ಬಾಲ ನ್ಯಾಯ ಕಾಯಿದೆಗೆ 2015ರಲ್ಲಿ ಮಹತ್ವದ ತಿದ್ದುಪಡಿ ತಂದಿದ್ದ ಕೇಂದ್ರ ಸರ್ಕಾರ, ಈ ಎಲ್ಲ ಮಕ್ಕಳ ಆರೈಕೆ ಕೇಂದ್ರಗಳನ್ನು ನೋಂದಣಿ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಿತ್ತು. ಆದರೆ ದೇಶದ ಕೆಲ ಅನಾಥಾಶ್ರಮಗಳು ಕೇಂದ್ರ ಸರ್ಕಾರದ ಈ ನಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದವು.
ಕಳೆದ ಡಿಸೆಂಬರ್‌ ನಿಂದ 2300 ಸಂಸ್ಥೆಗಳು ನೋಂದಣಿ ಮಾಡಿಕೊಂಡಿದ್ದು, 4000 ಸಂಸ್ಥೆಗಳು ಇನ್ನೂ ನೋಂದಣಿ ಮಾಡಿಸಿಕೊಂಡಿಲ್ಲ. ಇದೇ ಕಾರಣಕ್ಕೆ ಈ ಮಿಷನರಿಗಳ ಸೇವೆಯ ಕುರಿತು ಸಾಕಷ್ಟು ಅನುಮಾನ ಹುಟ್ಟುವಂತೆ ಮಾಡಿವೆ. ಮಕ್ಕಳ ರಕ್ಷಣೆಯ ರಾಷ್ಟ್ರೀಯ ಸಮಿತಿಯ ಅಂಕಿಅಂಶದ ಪ್ರಕಾರ ದೇಶಾದ್ಯಂತ ನೋಂದಣಿಯಾಗಿರುವ ಸಂಸ್ಥೆಗಳಲ್ಲಿ 2,32,937 ಮಕ್ಕಳಿದ್ದು, ನೋಂದಣಿ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಸಂಸ್ಥೆಗಳ ವ್ಯಥೆ ಬಗ್ಗೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT