ಚಂದ್ರೇಶ್ವರ್ ಪ್ರಸಾದ್ ಸಿಂಗ್ 
ದೇಶ

ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ, ಪ್ರಚಾರ ಗಿಟ್ಟಿಸುವ ಹುನ್ನಾರ- ಬಿಜೆಪಿ ಮುಖಂಡ

ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ತನ್ನ ಮೇಲಿನ ಹಲ್ಲೆ ಪ್ರಕರಣವನ್ನು ಬೆಳಕಿಗೆ ತರುವ ಮೂಲಕ ಪ್ರಚಾರ ಗಿಟ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ ಜಾರ್ಖಂಡ್ ನ ಬಿಜೆಪಿ ಮುಖಂಡ ಚಂದ್ರೇಶ್ವರ್ ಪ್ರಸಾದ್ ಸಿಂಗ್ ಆರೋಪಿಸಿದ್ದಾರೆ.

ರಾಂಚಿ : ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ತನ್ನ ಮೇಲಿನ ಹಲ್ಲೆ ಪ್ರಕರಣವನ್ನು ಬೆಳಕಿಗೆ ತರುವ ಮೂಲಕ ಪ್ರಚಾರ ಗಿಟ್ಟಿಸುವ  ಹುನ್ನಾರ ನಡೆಸುತ್ತಿದ್ದಾರೆ  ಜಾರ್ಖಂಡ್ ನ ಬಿಜೆಪಿ ಮುಖಂಡ ಚಂದ್ರೇಶ್ವರ್ ಪ್ರಸಾದ್ ಸಿಂಗ್ ಆರೋಪಿಸಿದ್ದಾರೆ.

ಸ್ವಾಮಿ ಅಗ್ನಿವೇಶ್ ಅವರಿಗೆ   ವೇದಿಕೆ ಮೇಲೆ  ಹಲ್ಲೆ ನಡೆಸುವ ವಿಚಾರ ಮೊದಲೇ ಅವರಿಗೆ ಗೊತಿತ್ತು.  ಪ್ರಚಾರಕ್ಕಾಗಿ ಈ ರೀತಿಯ ವ್ಯವಸ್ಥಿತ ಷಢ್ಯಂತ್ರ ನಡೆಸಲಾಗಿದೆ ಎಂದು ಅವರು ಟೀಕಿಸಿದ್ದಾರೆ.

ವಿದೇಶಿ ಹಣವನ್ನು ಸಂರಕ್ಷಿಸುತ್ತಿರುವ ಸ್ವಾಮಿ ಅಗ್ನಿವೇಶ್ ಭಾರತದ ಸಂಸ್ಕೃತಿಯನ್ನು ನಾಶಪಡಿಸುತ್ತಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆ ನಡೆದ್ದರೆ, ವೇದಿಕೆ ಮೇಲೆ ನಡೆದ ಹಲ್ಲೆಗಾಗಿ ಸ್ವಾಮಿ ಅಗ್ನಿವೇಶ್ ಹಾಗೂ ಅವರ ಕಡೆಯವರು ಎಷ್ಟು ಹಣ ಖರ್ಚು ಮಾಡಿದ್ದರು ಎಂಬುದು ಬಹಿರಂಗವಾಗಲಿದೆ ಎಂದು ಸಿಂಗ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಕೇಸರಿ ಬಟ್ಟೆ ತೊಟ್ಟಿರುವ ಸ್ವಾಮಿ ಅಗ್ನಿವೇಶ್  ವಂಚಕ , ಸ್ವಾಮಿ ಅಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾರ್ಖಂಡ್  ನ ಪಕೂರ್  ಜಿಲ್ಲೆಯಲ್ಲಿ ಕಾರ್ಯಕ್ರಮವೊಂದನ್ನು ಮುಗಿಸಿ ನಿರ್ಗಮಿಸುವಾಗ ಸ್ವಾಮಿ ಅಗ್ನಿವೇಶ್ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಆದರೆ, ಆ ಕಾರ್ಯಕರ್ತರು  ನಮ್ಮ ಪಕ್ಷದ ಕಾರ್ಯಕರ್ತರಲ್ಲ ಎಂದು ಬಿಜೆಪಿ ಹೇಳಿಕೆ ನೀಡಿದೆ.

 ಈ ಘಟನೆ ನಂತರ ಸ್ವಾಮಿ ಅಗ್ನಿವೇಶ್ ಅವರಿಗೆ ಜಾರ್ಖಂಡ್ ರಾಜ್ಯಸರ್ಕಾರದಿಂದ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ರಘುಬರ್ ದಾಸ್  ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT