ದೇಶ

ಹಣಕ್ಕಾಗಿ ಸರ್ಕಾರಿ ಕೆಲಸ: ಬಿಜೆಪಿ ಸಂಸದನ ಪುತ್ರಿ ಸೇರಿ 19 ಅಧಿಕಾರಿಗಳ ಬಂಧನ

ಹಣಕ್ಕಾಗಿ ಕೆಲಸ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪಿಆರ್ ಶರ್ಮಾ ಪುತ್ರಿ ಸೇರಿದಂತೆ ಅಸ್ಸಾಂ ಸರ್ಕಾರದ 19 ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ...

ಗುವಾಹಟಿ: ಹಣಕ್ಕಾಗಿ ಕೆಲಸ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪಿಆರ್ ಶರ್ಮಾ ಪುತ್ರಿ ಸೇರಿದಂತೆ ಅಸ್ಸಾಂ ಸರ್ಕಾರದ 19 ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ. 
2016ರಲ್ಲಿ ನಡೆದಿದ್ದ ಅಸ್ಸಾಂ ಸಾರ್ವಜನಿಕ ಸೇವಾ ಆಯೋಗ(ಎಪಿಎಸ್ಸಿ) ಪರೀಕ್ಷೆಯಲ್ಲಿ ಬಂಧಿತ ಅಧಿಕಾರಗಳ ಕೈಬರಹ ಹೊಂದಾಣಿಕೆ ಆಗದ ಕಾರಣ 19 ಅಧಿಕಾರಿಗಳನ್ನು ಪೊಲೀಸರು ಗುವಾಹಟಿಯಲ್ಲಿ ಬಂಧಿಸಿದ್ದಾರೆ. 
ಎಪಿಎಸ್ಸಿ ಹಣಕ್ಕಾಗಿ ಕೆಲಸ ಹಗರಣಕ್ಕೆ ಸಂಬಂಧಿಸಿದಂತೆ ಡಿಬ್ರೂಗರ್ ಪೊಲೀಸರು ತನಿಖೆ ನಡೆಸುತ್ತಿದ್ದು ಈ ಸಂಬಂಧ ಅಸ್ಸಾಂ ಸಾರ್ವಜನಿಕ ಸೇವಾ(ಎಸಿಎಸ್), ಅಸ್ಸಾಂ ಪೊಲೀಸ್ ಸರ್ವಿಸ್(ಎಪಿಎಸ್)ನ 2016ರ ಬ್ಯಾಚ್ ನ 19 ಅಧಿಕಾರಿಗಳ ಕೈಬರಹವನ್ನು ಪರೀಕ್ಷಿಸಿದ್ದು ಇದು ಉತ್ತರ ಪತ್ರಿಕೆಯಲ್ಲಿನ ಕೈಬರಹಕ್ಕೂ ಹೊಂದಾಣಿಕೆ ಆಗದ ಹಿನ್ನೆಲೆಯಲ್ಲಿ 19 ಅಧಿಕಾರಿಗಳಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದರು. 
ಎಪಿಎಸ್ಸಿ ಮುಖ್ಯಸ್ಥರಾಗಿದ್ದ ರಾಕೇಶ್ ಪೌಲ್ ಎಂಬುವರು 2013ರಲ್ಲಿ ಪರೀಕ್ಷೆ ನಡೆಸಿದ್ದು ಈ ಪರೀಕ್ಷೆಯಲ್ಲಿ 19 ಅಧಿಕಾರಿಗಳು ಕೆಲಸ ಪಡೆದುಕೊಂಡಿದ್ದರು. ಈ ಪರೀಕ್ಷೆಯಲ್ಲಿ ಗೋಲ್ ಮಾಲ್ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ 2016ರಲ್ಲಿ ರಾಕೇಶ್ ಪೌಲ್ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಹಗರಣ ಬಯಲಿಗೆ ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ