ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ 
ದೇಶ

ಹಿಂದುತ್ವ ಹೆಸರಿನಲ್ಲಿ ಬಿಜೆಪಿ ತಾಲಿಬಾನ್ ಆರಂಭಿಸಿದೆಯೇ?: ಮತ್ತೆ ವಿವಾದದಲ್ಲಿ ಶಶಿ ತರೂರ್

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಭಾರತ ಹಿಂದೂ ಪಾಕಿಸ್ತಾನವಾಗಲಿದೆ ಎಂದು ಹೇಳಿಕೆ ನೀಡಿದ ತೀವ್ರ ಆಕ್ರೋಶಕ್ಕೆ ವ್ಯಕ್ತವಾದ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಮತ್ತೊಂದು ವಿವಾದಾತ್ಮಕ ಹೇಳಿಕೆಯೊಂದನ್ನು ಬುಧವಾರ ನೀಡಿದ್ದಾರೆ...

ತಿರುವನಂತಪುರ: ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಭಾರತ ಹಿಂದೂ ಪಾಕಿಸ್ತಾನವಾಗಲಿದೆ ಎಂದು ಹೇಳಿಕೆ ನೀಡಿದ ತೀವ್ರ ಆಕ್ರೋಶಕ್ಕೆ ವ್ಯಕ್ತವಾದ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಮತ್ತೊಂದು ವಿವಾದಾತ್ಮಕ ಹೇಳಿಕೆಯೊಂದನ್ನು ಬುಧವಾರ ನೀಡಿದ್ದಾರೆ. 
ಬಿಜೆಪಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ದ ತೀವ್ರವಾಗಿ ಕಿಡಿಕಾರಿರುವ ಶಶಿ ತರೂರ್, ಹಿಂದುತ್ವದ ಹೆಸರಿನಲ್ಲಿ ಬಿಜೆಪಿ ತಾಲಿಬಾನ್ ಆರಂಭಿಸಿದೆಯೇ ಎಂದು ಪ್ರಶ್ನಿಸಿದ್ದಾರೆ. 
ಬಿಜೆಪಿಯವರು ನಾನು ಪಾಕಿಸ್ತಾನಕ್ಕೆ ಹೋಗಬೇಕೆಂದು ಹೇಳುತ್ತಿದ್ದಾರೆ. ಅವರಂತೆ ನಾನು ಹಿಂದೂ ಅಲ್ಲ ಎಂಬುದನ್ನು ನಿರ್ಧರಿಸುವ ಹಕ್ಕನ್ನು ಅವರಿಗೆ ಯಾರು ಕೊಟ್ಟರು? ನನಗೆ ನನ್ನ ದೇಶದಲ್ಲಿ ಉಳಿಯುವ ಹಕ್ಕಿಲ್ಲವೇ? ಎಂದು ಕೇಳಿದ್ದಾರೆ. 
ಹಿಂದೂ ಪಾಕಿಸ್ತಾನ ಕುರಿತಂತೆ ಹೇಳಿಕೆ ನೀಡಿದ್ದ ಶಶಿ ತರೂರ್ ವಿರುದ್ಧ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರಂತೆ ತಿರುವನಂತಪುರದಲ್ಲಿರುವ ತರೂರ್ ಅವರ ಕಚೇರಿ ಎದುರು ನಿನ್ನೆ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಪ್ಪು ಬಾವುಟ ಪ್ರದರ್ಶಿಸಿದ್ದರು. ಇದೇ ವೇಳೆ ತರೂರ್ ಪಾಕಿಸ್ತಾನಕ್ಕೆ ಹೋಗಲಿ ಎಂದು ಘೋಷಣೆ ಕೂಗಿದ್ದರು. ಇದಲ್ಲದೆ, ಕೆಲ ಕಾರ್ಯಕರ್ತರು ಕಚೇರಿ ಮೇಲೆ ದಾಳಿ ನಡೆಸಿ ಮಸಿ ಎರಚಿ ಆಕ್ರೋಶ ವ್ಯಕ್ತಪಡಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT