ಪಿಸಿ ಜಾರ್ಜ್ 
ದೇಶ

ಟೋಲ್ ಶುಲ್ಕ ಕೇಳಿದ್ದಕ್ಕೆ ಬ್ಯಾರಿಯರ್ ಮುರಿದ ದರ್ಪ ತೋರಿಸಿದ ಕೇರಳ ಶಾಸಕ

ಟೋಲ್ ಶುಲ್ಕ ಕೇಳಿದ್ದಕ್ಕೆ ಆಕ್ರೋಶಗೊಂಡ ಕೇರಳ ಶಾಸಕರೊಬ್ಬರು ಟೋಲ್ ಗೇಟ್ ನ ಬ್ಯಾರಿಯರ್...

ಪಲ್ಲಿಯೆಕ್ಕರಾ(ಕೇರಳ): ಟೋಲ್ ಶುಲ್ಕ ಕೇಳಿದ್ದಕ್ಕೆ ಆಕ್ರೋಶಗೊಂಡ ಕೇರಳ ಶಾಸಕರೊಬ್ಬರು ಟೋಲ್ ಗೇಟ್ ನ ಬ್ಯಾರಿಯರ್ ಮುರಿದು ದರ್ಪ ಪ್ರದರ್ಶಿಸಿದ ಮಂಗಳವಾರ ರಾತ್ರಿ ನಡೆದಿದೆ.
ನಿನ್ನೆ ಕೇರಳ ಶಾಸಕ ಪಿ.ಸಿ. ಜಾರ್ಜ್ ಅವರು ತ್ರಿಶೂರ್​ನಿಂದ ಕೊಚ್ಚಿ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಪಲ್ಲಿಯೆಕ್ಕರಾ ಟೋಲ್ ಬಳಿ ಕಾರನ್ನ ತಡೆದ ಟೋಲ್ ಸಿಬ್ಬಂದಿ ಶುಲ್ಕ ಪಾವತಿಸಲು ಕೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಶಾಸಕ ಕಾರಿನಿಂದ ಇಳಿದು ಬಂದು ಬ್ಯಾರಿಯರ್ ಅನ್ನೇ ಮುರಿದಿದ್ದು, ಅದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇನ್ನು ಈ ಕುರಿತ ಪ್ರತಿಕ್ರಿಯಿಸಿರುವ ಶಾಸಕ ಜಾರ್ಜ್ ಅವರು, ಶಾಸಕ ಎಂಬ ನಾಮಫಲಕವಿದ್ದರೂ ನನ್ನ ಕಾರು ತೆರಳಲು ಅವಕಾಶ ಕೊಡಲಿಲ್ಲ ಎಂದಿದ್ದಾರೆ. 7 ಬಾರಿ ಶಾಸಕರಾಗಿ ಜಾರ್ಜ್ ಈ ಹಿಂದೆಯೂ ಹಲವು ಬಾರಿ ವಿವಾದಗಳಿಂದ ಸುದ್ದಿಯಾಗಿದ್ದರು.
ಪೂಂಜರ್ ಕ್ಷೇತ್ರದ ಶಾಸಕ ಪಿ.ಸಿ. ಜಾರ್ಜ್, ಫೆಬ್ರವರಿ 2017ರಂದು ಶಾಸಕರ ಭವನದಲ್ಲಿ ಊಟ ತರಲು ನಿಧಾನ ಮಾಡಿದ ಬಾಲಕನಿಗೆ ಕಪಾಳಮೋಕ್ಷ ಮಾಡಿ ಸುದ್ದಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT