ರಾಕೇಶ್ ಸಿನ್ಹಾ, 
ದೇಶ

ರಾಜ್ಯಸಭೆಯ ಮೂವರು ನಾಮನಿರ್ದೇಶಿತ ಸದಸ್ಯರು ಪ್ರಮಾಣ ವಚನ ಸ್ವೀಕಾರ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ನಾಮನಿರ್ದೇಶಿತಗೊಂಡಿದ್ದ ಕವಿ ರಾಕೇಶ್ ಸಿನ್ಹಾ, ನೃತ್ಯಗಾರ್ತಿ ಸೊನಾಲ್ ಮಾನ್ ಸಿಂಗ್ ಹಾಗೂ ಶಿಲ್ಪಕಲೆ ಕಲಾವಿದ ರಘುನಾಥ್ ಮೊಹಾಪಾತ್ರ ಇಂದು ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ  ನಾಮನಿರ್ದೇಶಿತಗೊಂಡಿದ್ದ ಕವಿ ರಾಕೇಶ್ ಸಿನ್ಹಾ, ನೃತ್ಯಗಾರ್ತಿ ಸೊನಾಲ್ ಮಾನ್ ಸಿಂಗ್ ಹಾಗೂ ಶಿಲ್ಪಕಲೆ ಕಲಾವಿದ  ರಘುನಾಥ್ ಮೊಹಾಪಾತ್ರ ಇಂದು ರಾಜ್ಯಸಭೆಯ ಸದಸ್ಯರಾಗಿ  ಪ್ರಮಾಣ ವಚನ ಸ್ವೀಕರಿಸಿದರು.

ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯನಾಯ್ಡು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.

ಜುಲೈ 14 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್,  ಮಾಜಿ ನಾಯಕ ರಾಕೇಶ್ ಶಕಲ್ ಸೇರಿದಂತೆ ನಾಲ್ವರನ್ನು  ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಿದ್ದರು. ಆದರೆ. ಇಂದು  ರಾಕೇಶ್ ಸಿನ್ಹಾ, ನೃತ್ಯಗಾರ್ತಿ ಸೊನಾಲ್ ಮಾನ್ ಸಿಂಗ್ ಹಾಗೂ ಶಿಲ್ಪಕಲೆ ಕಲಾವಿದ  ರಘುನಾಥ್ ಮೊಹಾಪಾತ್ರ  ಪ್ರಮಾಣ ವಚನ ಸ್ವೀಕರಿಸಿದರು.

 ಒಡಿಶಾದ್ದ ಪ್ರಖ್ಯಾತ ಶಿಲ್ಪಕಲಾವಿದರಾಗಿರುವ ರಘುನಾಥ್ ಮೊಹಾಪಾತ್ರ ಪದ್ಮ ವಿಭೂಷ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ. 1959 ರಿಂದಲೂ 2000 ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ. ಪ್ರಸಿದ್ಧ ತೀರ್ಥಕ್ಷೇತ್ರ ಪುರಿ ಜಗನ್ನಾಥ ದೇವಾಲಯದಲ್ಲೂ ಸುಂದರ ಕೆತ್ತನೆ ಕೆಲಸ ಮಾಡಿದ್ದಾರೆ.

ರಾಕೇಶ್ ಸಿನ್ಹಾ, ಆರ್ ಎಸ್ ಎಸ್ ನಾಯಕರಾಗಿದ್ದು,  ದೆಹಲಿ ಮೂಲಕ ಭಾರತೀಯ ನೀತಿ ಪೌಂಢೇಷನ್ ನ   ಗೌರವಾನ್ವಿತ ನಿರ್ದೇಶಕರು ಹಾಗೂ ಚಿಂತಕರಾಗಿದ್ದಾರೆ.  ದೆಹಲಿ ವಿಶ್ವವಿದ್ಯಾಲಯದ ಮೊತಿಲಾಲ್ ನೆಹರೂ ಕಾಲೇಜಿನಲ್ಲಿ ಪ್ರೋಫೆಸರ್ ಆಗಿದ್ದಾರೆ. ಅಲ್ಲದೇ ಭಾರತೀಯ ಸಾಮಾಜಿಕ ವಿಜ್ಞಾನ ಸಂಶೋಧನಾ ಸಮಿತಿಯ ಸದಸ್ಯರಾಗಿದ್ದಾರೆ.

ಭಾರತೀಯ ಶಾಸ್ತ್ರೀಯ ನೃತ್ಯಗಾರ್ತಿಯರಲ್ಲಿ ಒಬ್ಬರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಭರತನಾಟ್ಯ ಹಾಗೂ ಒಡಿಶಿ ನೃತ್ಯ ಪ್ರದರ್ಶಿಸಿದ್ದಾರೆ. ಇವರು ಉತ್ತಮ ನೃತ್ಯ ಶಿಕ್ಷಕರು ಹಾಗೂ ಸಾಮಾಜಿಕ ಹೋರಾಟಗಾರರೂ ಆಗಿದ್ದಾರೆ.   1977ರಲ್ಲಿ ದೆಹಲಿಯಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯ ಕೇಂದ್ರವನ್ನು ಸ್ಥಾಪಿಸಿದ್ದಾರೆ..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT