ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ವಿದ್ಯುತ್ ಭರವಸೆ ಈಡೇರಿಸುವಲ್ಲಿ ಕಾಂಗ್ರೆಸ್ ವಿಫಲ: ಪ್ರಧಾನಿ ಮೋದಿ

2004 ರಿಂದ 2014ರವರೆಗೂ ಕೇಂದ್ರದಲ್ಲಿ ಅಧಿಕಾರ ನಡೆಸಿದ್ದ ಯುಪಿಎ ಸರ್ಕಾರ ಜನತೆಗೆ ನೀಡಲಾಗಿದ್ದ ವಿದ್ಯುತ್ ಭರವಸೆ ಈಡೇರಿಸುವಲ್ಲಿ ವಿಫಲವಾಗಿತ್ತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ...

ನವದೆಹಲಿ: 2004 ರಿಂದ 2014ರವರೆಗೂ ಕೇಂದ್ರದಲ್ಲಿ ಅಧಿಕಾರ ನಡೆಸಿದ್ದ ಯುಪಿಎ ಸರ್ಕಾರ ಜನತೆಗೆ ನೀಡಲಾಗಿದ್ದ ವಿದ್ಯುತ್ ಭರವಸೆ ಈಡೇರಿಸುವಲ್ಲಿ ವಿಫಲವಾಗಿತ್ತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಹೇಳಿದ್ದಾರೆ. 
ದೇಶದ ಲಕ್ಷಾಂತರ ಗ್ರಾಮಸ್ಥರನ್ನು ಕುರಿತು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ಅವರು, 2009ರೊಳಗೆ ಪ್ರತೀ ಗ್ರಾಮಕ್ಕೆ ವಿದ್ಯುತ್ ಸೌಲಭ್ಯ ಒದಗಿಸುವುದಾಗಿ ಕಾಂಗ್ರೆಸ್ ಸರ್ಕಾರ 2005ರಲ್ಲಿ ಭರವಸೆಗಳನ್ನು ನೀಡಿತ್ತು. ನಂತರ ಆಡಳಿತಾರೂಢ ಪಕ್ಷದ ರಾಷ್ಟ್ರಪತಿಗಳು ಪ್ರತೀ ಮನೆಗೂ ವಿದ್ಯುತ್ ಸೌಲಭ್ಯ ಒದಗಿಸುವ ಭರವಸೆಯನ್ನು ನೀಡಿದ್ದರು. ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಇಂತಹ ಯಾವುದೇ ಭರವಸೆಗಳೂ ಈಡೇರಲೇ ಇಲ್ಲ ಎಂದು ಹೇಳಿದ್ದಾರೆ. 
ದುರಾದೃಷ್ಚಕರ ಸಂಗತಿ ಎಂದರೆ, ಸ್ವಾತಂತ್ರ್ಯ ಬಂದು ಹಲವು ವರ್ಷಗಳು ಕಳೆದರೂ, ದೇಶದಲ್ಲಿರುವ ಹಲವು ಗ್ರಾಮಗಳು ಕತ್ತಲಲ್ಲಿಯೇ ಕಾಲ ಕಳೆಯುವಂತಾಗಿತ್ತು. ನಮಗೆ ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿದ್ದು, 18 ಸಾವಿರ ಗ್ರಾಮಗಳು ವಿದ್ಯುತ್ ಸಂಪರ್ಕ ಹೊಂದಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಲವು ವಿದ್ಯುತ್ ಯೋಜನೆಗಳನ್ನು ಕೈಗೊಳ್ಳಲಾಯಿತು. ಟೌನ್'ಗಳು ಹಾಗೂ ಗ್ರಾಮಗಳಿಗೆ ವಿದ್ಯುತ್ ಸೌಲಭ್ಯಗಳನ್ನು ನೀಡಲಾಯಿತು. ಕೇವಲ ವಿದ್ಯುತ್ ಸಂಪರ್ಕವಷ್ಟೇ ಅಲ್ಲದೆ, ಭಾರತ ಸರ್ಕಾರ ಹಲವು ವ್ಯವಸ್ಥೆಗಳ ಕಾರ್ಯವೈಖರಿಗಳನ್ನು ಸುಧಾರಣೆ ಮಾಡಲಾಯಿತು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!