ಕೊಹಿನೂರ್ 
ದೇಶ

ಕೊಹಿನೂರ್ ವಜ್ರ ವಾಪಸ್ ತರಲು ವಿದೇಶಿ ಅಧಿಕಾರಿಗಳ ಜತೆ ಚರ್ಚೆ: ವಿಕೆ ಸಿಂಗ್

ಜಗತ್ತಿನ ಅಮೂಲ್ಯ ವಜ್ರಗಳಲ್ಲಿ ಒಂದಾಗಿರುವ ಕೊಹಿನೂರ್ ಮತ್ತು ಇತರ ಪ್ರಾಚೀನ ವಸ್ತುಗಳನ್ನು ವಾಪಸ್ ತರುವ ಕುರಿತಂತೆ ವಿದೇಶಿ ಅಧಿಕಾರಿಗಳ ಜತೆ ಚರ್ಚಿಸುತ್ತಿರುವುದಾಗಿ...

ನವದೆಹಲಿ: ಜಗತ್ತಿನ ಅಮೂಲ್ಯ ವಜ್ರಗಳಲ್ಲಿ ಒಂದಾಗಿರುವ ಕೊಹಿನೂರ್ ಮತ್ತು ಇತರ ಪ್ರಾಚೀನ ವಸ್ತುಗಳನ್ನು ವಾಪಸ್ ತರುವ ಕುರಿತಂತೆ ವಿದೇಶಿ ಅಧಿಕಾರಿಗಳ ಜತೆ ಚರ್ಚಿಸುತ್ತಿರುವುದಾಗಿ ಕೇಂದ್ರ ಸಚಿವ ವಿಕೆ ಸಿಂಗ್ ಹೇಳಿದ್ದಾರೆ. 
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು ಭಾರತೀಯರು ಮತ್ತು ಸಂಸತ್ ವ್ಯಕ್ತಪಡಿಸಿದ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತದ ಪುರಾತತ್ವ ಸಮೀಕ್ಷೆಯಿಂದ ಮಾಹಿತಿ ಪಡೆದು ಮತ್ತೆ ಕೊಹಿನೂರ್ ಮತ್ತು ಇತರ ಪ್ರಾಚೀನ ವಸ್ತುಗಳನ್ನು ವಾಪಸ್ ತರಲು ವಿದೇಶಿ ಅಧಿಕಾರಿಗಳ ಜತೆ ಚರ್ಚಿಸುತ್ತಿರುವುದಾಗಿ ಹೇಳಿದರು. 
ಅಮೂಲ್ಯವಾದ ಕೊಹಿನೂರ್ ವಜ್ರ ಹಾಗೂ ಇತರ ಪ್ರಾಚೀನ ವಸ್ತುಗಳನ್ನು ಮರಳಿ ತರಲು ವಿದೇಶಾಂಗ ಸಚಿವಾಲಯ ಪ್ರಯತ್ನಿಸುತ್ತಿದೆಯೇ ಎಂದು ಕೇಳಿದ ಪ್ರಶ್ನೆಗೆ ಸಚಿವರು ಈ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT