ಸಂಗ್ರಹ ಚಿತ್ರ 
ದೇಶ

ರಾಜ್ಯಸಭೆ: 10 ಭಾಷೆಗಳಲ್ಲಿ ಮಾತನಾಡಿ ದಾಖಲೆ ಬರೆದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಬುಧವಾರ ಆರಂಭಗೊಂಡ ಮುಂಗಾರು ಅಧಿವೇಶನದಲ್ಲಿ 10 ಭಾಷೆಗಳಲ್ಲಿ ಮಾತನಾಡಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಬುಧವಾರ ಆರಂಭಗೊಂಡ ಮುಂಗಾರು ಅಧಿವೇಶನದಲ್ಲಿ 10 ಭಾಷೆಗಳಲ್ಲಿ ಮಾತನಾಡಿ ಹೊಸ ದಾಖಲೆ ನಿರ್ಮಿಸಿದ್ದಾರೆ.
ಬುಧವಾರ ಆರಂಭವಾದ ರಾಜ್ಯಸಭೆ ಕಲಾಪದಲ್ಲಿ ವೆಂಕಯ್ಯ ನಾಯ್ಡು ಅವರು, ಯಾವುದೋ ಒಂದು ವಿಚಾರಕ್ಕೆ ಸಂಬಂಧಿಸಿದ ಘೋಷಣೆ ಮಾಡುವಾಗ ಬಂಗಾಳಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ನೇಪಾಳಿ, ಒರಿಯಾ, ಪಂಜಾಬಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಮಾತನಾಡಿದ್ದು, ಇದು ಹೊಸ ದಾಖಲೆಯಾಗಿ ಮಾರ್ಪಟ್ಟಿದೆ.
ಇದೇ ವೇಳೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ರಾಜ್ಯಸಭೆ ಕಲಾಪದಲ್ಲಿ 22 ಭಾಷೆಗಳಲ್ಲಿ ಮಾತನಾಡಬಹುದು ಎಂದು ಪ್ರಕಟಿಸಿರು. ಆದರೆ ಸದಸ್ಯರು ಮಾತನಾಡುವಾಗ ಸಚಿವಾಲಯದ ಗಮನಕ್ಕೆ ತರಬೇಕಾಗುತ್ತದೆ ಎಂದೂ ನಾಯ್ಡು ಮಾಹಿತಿ ನೀಡಿದರು.
ರಾಜ್ಯಸಭೆಯಲ್ಲಿ ಈ ಮೊದಲು ರಾಜ್ಯಸಭೆಯಲ್ಲಿ ಅಸ್ಸಾಮೀ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ,  ಒರಿಯಾ, ಪಂಜಾಬಿ, ತಮಿಳು , ತೆಲುಗು , ಉರ್ದು ಸೇರಿದಂತೆ 17 ಭಾಷೆಗಳಲ್ಲಿ ಮಾತನಾಡುವ ಅವಕಾಶ ಇತ್ತು.  ಇದೀಗ ಹೆಚ್ಚುವರಿಯಾಗಿ  ದೋಗ್ರಿ, ಕಾಶ್ಮೀರಿ, ಕೊಂಕಣಿ, ಸಾಂಥಾಲಿ ಮತ್ತು ಸಿಂಧಿ ಭಾಷೆಗಳ ಸೇರ್ಪಡೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT