ಸಂಗ್ರಹ ಚತ್ರ 
ದೇಶ

ತಮ್ಮನ ಹತ್ಯೆ ಸೇಡು: 7ನೇ ತರಗತಿ ವಿದ್ಯಾರ್ಥಿನಿಯಿಂದ ಬಿಸಿಯೂಟಕ್ಕೆ ವಿಷ!

ತನ್ನ ಸಹೋದರನ ಕೊಲೆಗೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಊಟ ಮಾಡುವ ಬಿಸಿಯೂಟಕ್ಕೆ ವಿಷ ಹಾಕುವ ಯತ್ನ ನಡೆಸಿದ್ದ.....

ಗೋರಖ್‌ಪುರ(ಉತ್ತರ ಪ್ರದೇಶ): ತನ್ನ ಸಹೋದರನ ಕೊಲೆಗೆ ಸೇಡು ತೀರಿಸಿಕೊಳ್ಳುವ ಸಲುವಾಗಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಊಟ ಮಾಡುವ ಬಿಸಿಯೂಟಕ್ಕೆ ವಿಷ ಹಾಕುವ ಯತ್ನ ನಡೆಸಿದ್ದ  ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಬಂಕಟ ಪೊಲೀಸ್‌ ಠಾಣೆಯ ವ್ಯಾಪ್ತಿಗೆ ಬರುವ  ಬುಲಿಯಾ ಹಳ್ಳಿಯಲ್ಲಿರುವ ಶಾಲೆಯಲ್ಲಿ ಈ ಪ್ರಕರಣ ನಡೆದಿದೆ. ಶಾಲೆಯಲ್ಲಿ ಬಿಸಿಯೂಟಕ್ಕಾಗಿ ಬೇಯಿಸಿದ ಆಹಾರದ ಪಾತ್ರೆಗೆ ವಿದ್ಯಾರ್ಥಿನಿಯು ವಿಷ ಬೆರೆಸಿದ್ದಾಳೆ ಎಂದು ಶಾಲಾ ಆಡಳಿತ ಮಂಡಳಿ ಪೋಲೀಸರಿಗೆ ದೂರು ಸಲ್ಲಿಸಿದ್ದರು.
ವಿದ್ಯಾರ್ಥಿಗಳು ಊಟ ಮಾಡುವ ಮುನ್ನವೇ ವಿಚಾರ ತಿಳಿದದ್ದರಿಂದ ಯಾವ ಜೀವಹಾನಿಯೂ ಸಂಭವಿಸಿಲ್ಲ. ವಿದ್ಯಾರ್ಥಿನಿಯು ಆಹಾರದಲ್ಲಿ ವಿಷ ಬೆರೆಸಿದ್ದು ತಿಳಿದ ಗ್ರಾಮಸ್ಥರು ಶಾಲೆಗೆ ಮುತ್ತಿಗೆ ಹಾಕಿದ್ದಲ್ಲದೆ ಆಕೆಯ ತಾಯಿಗೆ ಥಳಿಸಿದ್ದಾರೆ.
ಕಳೆದ ಏಪ್ರಿಲ್ ನಲ್ಲಿ ವಿದ್ಯಾರ್ಥಿನಿಯ ತಮ್ಮ 3 ನೇ ತರಗತಿ ವಿದ್ಯಾರ್ಥಿಯು ಶಾಲೆಯ 5 ನೇ ತರಗತಿ ವಿದ್ಯಾರ್ಥಿಯಿಂದ ಕೊಲೆಯಾಗಿದ್ದ. ಈ ಕೊಲೆಗೆ ಸೇಡು ತೀರಿಸಿಕೊಳ್ಳಬೇಕೆಂದು ವಿದ್ಯಾರ್ಥಿನಿ ಬಯಸಿದ್ದಳು. ಇದೇ ಕಾರಣಕ್ಕಾ ಆಕೆ ಬಿಸಿಯೂಟದಲ್ಲಿ ವಿಷ ಬೆರೆಸಿದ್ದಾಳೆ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ಆದರೆ ಬಾಲಕಿಯು ತನ್ನ ಮೇಲಿನ ಆರೋಪ ನಿರಾಕರಿಸಿದ್ದಾಳೆ. ಸದ್ಯ ವಿದ್ಯಾರ್ಥಿನಿಯ ಮೇಲೆ  ಐಪಿಸಿ ಸೆಕ್ಷನ್‌ 328ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ಅವಳನ್ನು ಬಾಲಾಪರಾಧುಇಗಳ ಗೃಹಕ್ಕೆ ಕಳಿಸಲು ಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT