ಸಾಂದರ್ಭಿಕ ಚಿತ್ರ 
ದೇಶ

5 ಗಂಗಾ ಜಲಾನಯನ ರಾಜ್ಯಗಳಲ್ಲಿ ಅರಣ್ಯ ಸಂರಕ್ಷಣಾ ಅಭಿಯಾನ

ಗಂಗಾ ಜಲಾನಯನ ರಾಜ್ಯಗಳಾದ ಉತ್ತರಖಂಡ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ , ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸ್ವಚ್ಛ ಗಂಗಾ ರಾಷ್ಟ್ರೀಯ ಆಯೋಗದಿಂದ ಅರಣ್ಯ ಸಂರಕ್ಷಣಾ ಅಭಿಯಾನವನ್ನು ಕೈಗೊಳ್ಳಲಾಗಿತ್ತು ಎಂದು ಕೇಂದ್ರ ಜಲ ಸಂಪನ್ಮೂಲ ಇಲಾಖೆ ಇಂದು ತಿಳಿಸಿದೆ.

ನವದೆಹಲಿ: ಗಂಗಾ ಜಲಾನಯನ ರಾಜ್ಯಗಳಾದ ಉತ್ತರಖಂಡ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ , ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಸ್ವಚ್ಛ ಗಂಗಾ ರಾಷ್ಟ್ರೀಯ ಆಯೋಗದಿಂದ  ಅರಣ್ಯ  ಸಂರಕ್ಷಣಾ ಅಭಿಯಾನವನ್ನು  ಕೈಗೊಳ್ಳಲಾಗಿತ್ತು ಎಂದು ಕೇಂದ್ರ ಜಲ ಸಂಪನ್ಮೂಲ ಇಲಾಖೆ ಇಂದು ತಿಳಿಸಿದೆ.

ಜುಲೈ 9 ರಿಂದ ಒಂದು ವಾರಗಳ ಕಾಲ ನಡೆದ ಈ ಅಭಿಯಾನ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ   ಐದು ರಾಜ್ಯಗಳ ಅರಣ್ಯ ಇಲಾಖೆಗಳು ಪ್ರಮುಖ ಪಾತ್ರ ವಹಿಸಿದ್ದು, ವಿಭಾಗೀಯ ಅರಣ್ಯ ಅಧಿಕಾರಿಗಳು ಗಳನ್ನು ಜಿಲ್ಲಾ ಮಟ್ಟದ ನೋಡಾಲ್ ಅಧಿಕಾರಿ ಮತ್ತು ಮುಖ್ಯ ಅರಣ್ಯ ಅಧಿಕಾರಿಗಳೆಂದು ರಾಜ್ಯಗಳ ಮಟ್ಟದಲ್ಲಿ ನಿಯೋಜಿಸಲಾಗಿದೆ ಎಂದು ತಿಳಿಸಲಾಗಿದೆ.

ಇವುಗಳನ್ನು ಹೊರತುಪಡಿಸಿದಂತೆ ನೆಹರೂ ಯುವ ಕೇಂದ್ರ ಸಂಘಟನೆ, ಗಂಗಾ ವಿಚಾರ್ ಮಂಚ್, ಮತಿತ್ತರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ  ವಿದ್ಯಾಕೇಂದ್ರಗಳು ಈ  ಅಭಿಯಾನದಲ್ಲಿ ಪಾಲ್ಗೊಂಡಿದ್ದವು.

ನವಾಮಿ ಗಂಗೆ ಕಾರ್ಯಕ್ರಮದ ಭಾಗವಾಗಿ ಈ ಅಭಿಯಾನವನ್ನು ಆಯೋಜಿಸಲಾಗಿದ್ದು, ಗಂಗಾ ಜಲ ಶುದ್ಧೀಕರಣ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಲಾಗಿದೆ ಎಂದು ಜಲಸಂಪನ್ಮೂಲ ಇಲಾಖೆಯಿಂದ ಬಿಡುಗಡೆಯಾಗಿರುವ ಮಾಹಿತಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT