ಹರ್‌ಸಿಮ್ರತ್‌ ಕೌರ್‌ ಬಾದಲ್, 
ದೇಶ

ಇದು ಸಂಸತ್, ಮುನ್ನಭಾಯಿ ಸಿನಿಮಾ ಸೆಟ್ ಅಲ್ಲ :ಹರ್‌ಸಿಮ್ರತ್‌ ಕೌರ್‌ ಬಾದಲ್

ಲೋಕಸಭೆಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವಾಗ ಎದ್ದು ನಿಂತ ಕೇಂದ್ರ ಸಚಿವೆ ಹರ್‌ಸಿಮ್ರತ್‌ ಕೌರ್‌ ಬಾದಲ್, ಇದು ಸಂಸತ್ , ಮುನ್ನಭಾಯಿ ಸಿನಿಮಾ ಸೆಟ್ ಅಲ್ಲ ಎಂದು ಹೇಳುವ ಮೂಲಕ ಬಾಯಿ ಮುಚ್ಚಿಸಲು ಪ್ರಯತ್ನ ನಡೆಸಿದ ಘಟನೆಯೂ ನಡೆಯಿತು.

ನವದೆಹಲಿ: ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿದ ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿಂದು ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಫೆಲ್ ನಡಲ್ ವಿಮಾನ ಖರೀದಿ ಒಪ್ಪಂದ , ನಿರುದ್ಯೋಗ , ನೋಟ್ ಅಮಾನ್ಯತೆ,  ಮಹಿಳೆಯರ ಅಸುರಕ್ಷತೆ ಸೇರಿದಂತೆ  ಹಲವು ವಿಚಾರಗಳ ಕುರಿತಂತೆ  ಕೇಂದ್ರಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಮಧ್ಯೆ ಎದ್ದು ಕೇಂದ್ರ ಸಚಿವೆ ನಿಂತ ಹರ್‌ಸಿಮ್ರತ್‌ ಕೌರ್‌ ಬಾದಲ್,   ಇದು ಸಂಸತ್ , ಮುನ್ನಭಾಯಿ ಸಿನಿಮಾ ಸೆಟ್ ಅಲ್ಲ ಎಂದು  ಜೋರು ಧ್ವನಿಯಲ್ಲಿ ರಾಹುಲ್ ಗಾಂಧಿ ಆರೋಪಗಳನ್ನು ಟೀಕಿಸಿದರು.

ಅಲ್ಲದೇ, ಈ ಹಿಂದೆ ರಾಹುಲ್ ಗಾಂಧಿ ಪಂಜಾಬ್ ರಾಜ್ಯದವರು ಯಾವಾಗಲೂ ಮಾದಕ ದ್ರವ್ಯದ ನಶೆಯಲ್ಲಿರುತ್ತಾರೆ  ಎಂದು ನೀಡಿದ ಹೇಳಿಕೆ  ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ ಹರ್‌ಸಿಮ್ರತ್‌ ಕೌರ್‌ ಬಾದಲ್,  ಇಂದು ಸದನಕ್ಕೆ ಏನು ತಿಂದು ಬಂದಿದ್ದೀರಿ ಎಂದು ಪ್ರಶ್ನಿಸುವ ಮೂಲಕ ರಾಹುಲ್ ಗಾಂಧಿ ಬಾಯಿ ಕಟ್ಟಿಹಾಕಲು ಪ್ರಯತ್ನಿಸಿದ ಪ್ರಸಂಗವೂ ನಡೆಯಿತು.

ನಂತರ ಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಹರ್‌ಸಿಮ್ರತ್‌ ಕೌರ್‌ ಬಾದಲ್ ಅವರನ್ನು ಸಮಾಧಾನಪಡಿಸಿ ರಾಹುಲ್ ಗಾಂಧಿ ಮಾತು ಮುಂದುವರೆಸಲು ಅವಕಾಶ ಮಾಡಿಕೊಟ್ಟರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT