ಸಂಗ್ರಹ ಚಿತ್ರ 
ದೇಶ

ರಾಜಸ್ಥಾನದಲ್ಲಿ ಮತ್ತೆ ಗೋ ಸಂರಕ್ಷಕರ ಸೋಗಿನಲ್ಲಿ ವ್ಯಕ್ತಿ ಮೇಲೆ ಹಲ್ಲೆ, ಸಾವು!

ಸಾಮೂಹಿಕ ಹಲ್ಲೆಗೆ ಸುಪ್ರೀಂ ಕೋರ್ಟ್ ವಿರೋಧ ವ್ಯಕ್ತಪಡಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ ಕೆಲವೇ ದಿನಗಳ ಅಂತರದಲ್ಲಿ ಮತ್ತೊಂದು ಸಾಮೂಹಿಕ ಹಲ್ಲೆಯಿಂದಾಗಿ ಸಾವು ಸಂಭವಿಸಿದೆ.

ಜೈಪುರ: ಸಾಮೂಹಿಕ ಹಲ್ಲೆಗೆ ಸುಪ್ರೀಂ ಕೋರ್ಟ್ ವಿರೋಧ ವ್ಯಕ್ತಪಡಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ ಕೆಲವೇ ದಿನಗಳ ಅಂತರದಲ್ಲಿ ಮತ್ತೊಂದು ಸಾಮೂಹಿಕ ಹಲ್ಲೆಯಿಂದಾಗಿ ಸಾವು ಸಂಭವಿಸಿದೆ.
ರಾಜಸ್ಥಾನದ ಆಳ್ವಾರ್ ಜಿಲ್ಲೆಯ ರಾಮಘಡ್ ನಲ್ಲಿ ಗೋ ಸಂರಕ್ಷಕರ ಸೋಗಿನಲ್ಲಿ ಕೆಲ ದುಷ್ಕರ್ಮಿಗಳು ವ್ಯಕ್ತಿಯ ಮೇಲೆ ಹಲ್ಲೆ ಸಾಮೂಹಿಕ ಹಲ್ಲೆ ಮಾಡಿ ಕೊಂದು ಹಾಕಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಕೊಲೆಗೀಡಾದ ವ್ಯಕ್ತಿಯನ್ನು ಅಕ್ಬರ್ ಎಂದು ಗುರುತಿಸಲಾಗಿದ್ದು. ನಿನ್ನೆ ಆಳ್ವಾರ್ ನಲ್ಲಿ ಈತ ಗೋವುಗಳನ್ನು ಅಕ್ರಮ ಸಾಗಣೆ ಮಾಡುತ್ತಿದ್ದ ಎಂದು ಆರೋಪಿಸಿ ಗೋಸಂರಕ್ಷಕರು ಎಂದು ಹೇಳಿಕೊಂಡ ಕೆಲ ದುಷ್ಕರ್ಮಿಗಳು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. 
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಆಳ್ವಾರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇತ್ತೀಚೆಗಷ್ಟೇ ದೇಶದಲ್ಲಿ ನಡೆಯುತ್ತಿರುವ ಗೋ ಸಂರಕ್ಷಕರ ಸೋಗಿನ ದುಷ್ಕರ್ಮಿಗಳು ಮತ್ತು ಮಕ್ಕಳ ಕಳ್ಳರು ಎಂದು ಶಂಕಿಸಿ ನಡೆಸಲಾಗುತ್ತಿದ್ದ ಸಾಮೂಹಿಕ ಹಲ್ಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ರಕ್ಷಣೆ ಸರ್ಕಾರದ ಹೊಣೆಯಾಗಿದ್ದು, ಸಾಮೂಹಿಕ ಹಲ್ಲೆ ತಡೆಯಲು ಕಾನೂನು ರಚಿಸಿ ಎಂದು ನಿರ್ದೇಶನ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT