ಉತ್ತರಪ್ರದೇಶದ ಶಹಜಾನ್ ಪುರದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಜನತೆಯನ್ನುದ್ದೇಶಿ ಮಾತನಾಡುತ್ತಿರುವ ಮೋದಿ 
ದೇಶ

ಪ್ರಧಾನಿ ಕುರ್ಚಿ ಬಿಟ್ಟರೆ ರಾಹುಲ್ ಗಾಂಧಿಗೆ ಬೇರೇನೂ ಕಾಣೋಲ್ಲ: ಪ್ರಧಾನಿ ಮೋದಿ

ಅವಿಶ್ವಾಸ ನಿರ್ಣಯ ಕುರಿತಂತೆ ಲೋಕಸಭೆಯಲ್ಲಿ ತಮನ್ನು ಅಪ್ಪಿಕೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಪ್ರಧಾನಮಂತ್ರಿಗಳ ಕುರ್ಚಿ...

ಶಹಜಾನ್ ಪುರ: ಅವಿಶ್ವಾಸ ನಿರ್ಣಯ ಕುರಿತಂತೆ ಲೋಕಸಭೆಯಲ್ಲಿ ತಮನ್ನು ಅಪ್ಪಿಕೊಂಡ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಪ್ರಧಾನಮಂತ್ರಿಗಳ ಕುರ್ಚಿ ಬಿಟ್ಟರೆ, ರಾಹುಲ್ ಗಾಂಧಿಗೆ ಬೇರೇನೂ ಕಾಣುವುದಿಲ್ಲ ಎಂದು ಶನಿವಾರ ಹೇಳಿದ್ದಾರೆ. 
ಉತ್ತರಪ್ರದೇಶದ ಶಹಜಾನ್ ಪುರದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಜನತೆಯನ್ನುದ್ದೇಶಿ ಮಾತನಾಡಿರುವ ಮೋದಿಯವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಲ್ಲವೇಕೆ ಎಂದು ವಿರೋಧ ಪಕ್ಷಗಳನ್ನು ನಾವು ಪ್ರಶ್ನೆ ಮಾಡಿದಾಗ ಅವರಿಗೆ ಉತ್ತರ ನೀಡಲು ಸಾಧ್ಯವಾಗಲಿಲ್ಲ. ಕೊನೆಗೆ ಪ್ರಧಾನಮಂತ್ರಿಗಳ ಕುರ್ಚಿಗೆ ಬಂದು ಹಸ್ತಲಾಘವಾ ಮಾಡಿ ಆಲಿಂಗನ ಮಾಡಿದರು ಎಂದು ಹೇಳಿದ್ದಾರೆ. 
ಬಳಿಕ 2014ರಿಂದ ರೈತರ ಕಲ್ಯಾಣಕ್ಕಾಗಿ ಎನ್'ಡಿಎ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ಪಟ್ಟಿ ಮಾಡಿದ ಅವರು, ವಿರೋಧ ಪಕ್ಷಗಳ ಮೊಸಳೆ ಕಣ್ಣೀರಿನ ವಿರುದ್ಧ ಕಿಡಿಕಾರಿದ್ದಾರೆ. 
ಅಧಿಕಾರದಲ್ಲಿರುವ ನನ್ನ ಸರ್ಕಾರ ಜನರ ವಿಶ್ವಾಸವನ್ನು ಗೆದ್ದಿದೆ. ಅಭಿವೃದ್ಧಿ ಕಾರ್ಯಗಳನ್ನು ಸುದೀರ್ಘವಾಗಿ ನಡೆಸುತ್ತಲೇ ಇದ್ದೇವೆ. ಯಾವುದೇ ತಪ್ಪುಗಳನ್ನು ಮಾಡದೇ ಇರುವುದು, ಸರಿ ಹಾದಿಯಲ್ಲಿ ನಡೆಯುತ್ತಿರುವುದು ನಾನು ಮಾಡಿದ ದೊಡ್ಡ ಅಪರಾಧ. 
ರಾಹುಲ್ ಗಾಂಧಿಯವರು ಪ್ರಧಾನಮಂತ್ರಿಗಳ ಕುರ್ಚಿಯತ್ತ ಹೇಗೆ ಓಡಿ ಬಂದರು ಎಂಬುದನ್ನು ನೀವೆಲ್ಲಾ ನೋಡಿದ್ದೀರಲ್ಲಾ, ಅವರಿಗೆ ಪ್ರಧಾನಮಂತ್ರಿಗಳ ಕುರ್ಚಿ ಬಿಟ್ಟರೆ ಬೇರೇನೂ ಕಾಣುತ್ತಿಲ್ಲ ಎಂದು ತಿಳಿಸಿದ್ದಾರೆ. 
2019ರ ವೇಳೆ ದೇಶದಲ್ಲಿರುವ ಎಲ್ಲಾ ಮನೆಗಳಿಗೂ ವಿದ್ಯುತ್ ನೀಡುವ ಕುರಿತು ನಾವು ಪ್ರತಿಜ್ಞೆ ಮಾಡಿದ್ದೇವೆ. ಕಾರಣಗಳಿಲ್ಲದೆಯೇ ಅವಿಶ್ವಾಸ ನಿರ್ಣಯ ಮಂಡನೆಯಾಗಿಲ್ಲ. ಶ್ರಮವಿಲ್ಲದೆ ಆರಾಮದಾಯಕವಾಗಿ ಹಣವನ್ನು ಗಳಿಸಿದವರ ಲೋಪದೋಷಗಳನ್ನು ಬಹಿರಂಗಪಡಿಸಿದ್ದೇವೆ. ಹೀಗಾಗಿಯೇ ಅವರು ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದರು. ಆದರೆ, ಜನರ ನಂಬಿಕೆ ನಾವು ಗೆಲ್ಲುವಂತೆ ಮಾಡಿತು.
ರೈತರಿಗೆ ಸಹಾಯ ಮಾಡುವ ಅವಕಾಶಗಳು ಸದಾಕಾಲ ಇದ್ದೇ ಇರುತ್ತವೆ. ಅದನ್ನು ಜಾರಿಗೆ ತರುವುದು ಮುಖ್ಯವಾಗಿರುತ್ತೆ. ಸಕ್ಕರೆ ಮೇಲಿನ ಎಂಎಸ್'ಪಿ (ಕನಿಷ್ಟ ಬೆಂಬಲ ಬೆಲೆ) ರೈತರಿಗೆ ಶೇ.80ರಷ್ಟು ಲಾಭವನ್ನು ನೀಡಲಿದೆ. ರೈತರ ಹೆಸರಿನಲ್ಲಿ ಮೊಸಳೆ ಕಣ್ಣೀರು ಹಾಕುತ್ತಿರುವವವರು ಅಧಿಕಾರದಲ್ಲಿದ್ದಾಗ ರೈತರಿಗಾಗಿ ಏನನ್ನೂ ಮಾಡಲಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT