ಪ್ರಧಾನ ಮಂತ್ರಿ ನರೇಂದ್ರ ಮೋದಿ 
ದೇಶ

ಇನ್ನು ಮುಂದೆ ಹೆಚ್ಚು ಸಂತೋಷವಾಗಿರುತ್ತೇನೆ; ಅಭಿಮಾನಿಗೆ ಮಾತು ಕೊಟ್ಟ ಪ್ರಧಾನಿ ಮೋದಿ

ಪ್ರತಿಪಕ್ಷಗಳ ಅವಿಶ್ವಾಸ ಗೊತ್ತುವಳಿ ಮಂಡನೆಯಲ್ಲಿ ಗೆದ್ದುಬಂದು ವಾರವಿಡೀ ಸದನದ ಕಲಾಪದಲ್ಲಿ ...

ನವದೆಹಲಿ: ಪ್ರತಿಪಕ್ಷಗಳ ಅವಿಶ್ವಾಸ ಗೊತ್ತುವಳಿ ಮಂಡನೆಯಲ್ಲಿ ಗೆದ್ದುಬಂದು ವಾರವಿಡೀ ಸದನದ ಕಲಾಪದಲ್ಲಿ ಬ್ಯುಸಿಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ನಿರಾಳರಾದಂತೆ ಕಂಡುಬಂದರು. ಟ್ವಿಟ್ಟರ್ ನಲ್ಲಿ ನಾನು ಆಗಾಗ ಸಂತೋಷವನ್ನು ಮುಖದಲ್ಲಿ ತೋರಿಸುತ್ತೇನೆ, ಈ ದೇಶದ 125 ಕೋಟಿ ಭಾರತೀಯರ ಆಶೀರ್ವಾದ ನನಗೆ ಶಕ್ತಿ ನೀಡುತ್ತದೆ ಎಂದು ಹೇಳಿದ್ದಾರೆ. ಟ್ವಿಟ್ಟರ್ ನಲ್ಲಿ ತಮ್ಮ ಅಭಿಮಾನಿಗಳು ಮತ್ತು ಅನುಯಾಯಿಗಳಿಗೆ ಉತ್ತರಿಸಿದ್ದಾರೆ.

ಮುಂಬೈ ಮೂಲದ ಶಿಲ್ಪಿ ಅಗರ್ವಾಲ್ ಅವರು ಪ್ರಧಾನಿಗಳೇ ನೀವು ನಗುತ್ತಿರಬೇಕು, ಬಾಕಿ ಎಲ್ಲಾ ಚೆನ್ನಾಗಿದೆ ಎಂದು ಕೇಳಿಕೊಂಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಪ್ರಧಾನ ಮಂತ್ರಿ, ನೀವು ಹೇಳಿರುವುದನ್ನು ತೆಗೆದುಕೊಂಡಿದ್ದೇನೆ ಎಂದು ನಗುವ ಎಮೋಜಿಯನ್ನು ಹಾಕಿದ್ದಾರೆ.
60-70ರ ಹೊಸ್ತಿನಲ್ಲಿಯೂ ನೀವು ಬಳಲದಂತೆ ಹೇಗೆ ಇರುತ್ತೀರಿ ಎಂದು ಕೇಳಿದ್ದಕ್ಕೆ ಮೋದಿಯವರು, 'ಈ ದೇಶದ 125 ಕೋಟಿ ಜನರ ಆಶೀರ್ವಾದ ನನಗೆ ಶಕ್ತಿ ನೀಡುತ್ತದೆ. ನನ್ನ ಎಲ್ಲಾ ಸಮಯವು ದೇಶಕ್ಕೆ' ಎಂದು ಉತ್ತರಿಸಿದ್ದಾರೆ.

#IndiaTrustModi ಎಂಬ ಹ್ಯಾಶ್ ಟಾಗ್ ನೊಂದಿಗೆ ಕಳೆದ ಶುಕ್ರವಾರ ಲೋಕಸಭೆಯಲ್ಲಿ ಅವಿಶ್ವಾಸ ಮತ ಗೆದ್ದದ್ದಕ್ಕೆ ಶೋಭಾ ಶೆಟ್ಟಿ ಎಂಬುವವರು ಅಭಿನಂದನೆ ಸಲ್ಲಿಸಿ ಕರ್ಮ ಯೋಗಿ ಎಂದು ಕರೆದಿದ್ದರು. ಅದಕ್ಕೆ ಮೋದಿ ನಿಮ್ಮ ಪ್ರೀತಿಯ ಮಾತುಗಳಿಗೆ ಧನ್ಯವಾದಗಳು ಎಂದು ಉತ್ತರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.

ಕಳೆದ ಶುಕ್ರವಾರ ಅವಿಶ್ವಾಸ ಮತ ನಿಲುವಳಿ ಸಮಯದಲ್ಲಿ ಪ್ರಧಾನಿ ಮೋದಿ ಸುಮಾರು ಒಂದೂವರೆ ಗಂಟೆ ಕಾಲ ನಿರಂತರವಾಗಿ ಮಾತನಾಡಿದ್ದರು.

ನಿನ್ನೆ ಉತ್ತರ ಪ್ರದೇಶದ ಶಹಜಾನ್ ಪುರದಲ್ಲಿ ರ್ಯಾಲಿಯಲ್ಲಿ, ನಂತರ ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರ ಜೊತೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT