ಪಿ ಚಿದಂಬರಂ 
ದೇಶ

ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣ: ಆ.7ರವರೆಗೂ ಬಂಧನಕ್ಕೆ ತಡೆ, ಬಂಧನ ಭೀತಿಯಿಂದ ಚಿದಂಬರಂ ಪಾರು

ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರು ಆಗಸ್ಟ್ 7ರವರೆಗೂ ಬಂಧನ ಭೀತಿಯಿಂದ ಪಾರಾಗಿದ್ದಾರೆ...

ನವದೆಹಲಿ: ಏರ್ ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಅವರು ಆಗಸ್ಟ್ 7ರವರೆಗೂ ಬಂಧನ ಭೀತಿಯಿಂದ ಪಾರಾಗಿದ್ದಾರೆ. 
ಚಿದಂಬರಂ ಅವರು 3,500 ಕೋಟಿ ಮೊತ್ತ ಏರ್ ಸೆಲ್-ಮ್ಯಾಕ್ಸಿಸ್ ಮತ್ತು 305 ಕೋಟಿ ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದು ದೆಹಲಿಯ ಪಟಿಯಾಲ ಕೋರ್ಟ್ ಇಂದು ವಿಚಾರಣೆ ನಡೆಸಿ ಆಗಸ್ಟ್ 7ರವರೆಗೂ ಬಂಧನಕ್ಕೆ ಮಧ್ಯಂತರ ತಡೆ ನೀಡಿದೆ. 
ಏರ್ ಸೆಲ್-ಮ್ಯಾಕ್ಸಿಸ್ ಸಂಬಂಧಿಸಿದಂತೆ 2011ರಲ್ಲಿ ಸಿಬಿಐ ಮತ್ತು 2012ರಲ್ಲಿ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಿತ್ತು. 
ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಬಂಧನಕ್ಕೆ ನೀಡಲಾಗಿದ್ದ ಮಧ್ಯಂತರ ತಡೆ ಆದೇಶವನ್ನು ದೆಹಲಿ ಹೈಕೋರ್ಟ್ ಆಗಸ್ಟ್ 7ರವರೆಗೂ ವಿಸ್ತರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT